<p><strong>ನವದೆಹಲಿ:</strong>ಜಗತ್ತನೇ ಬೆಚ್ಚಿಬೀಳಿಸಿ ಭಾರತವನ್ನೂ ನಲುಗಿಸುತ್ತಿರುವ ಮಾರಣಾಂತಿಕ ಕೋವಿಡ್-19 ಸೋಂಕಿನ ಬಗ್ಗೆ ತಮ್ಮ ಜನಪ್ರಿಯ ಕಾರ್ಯಕ್ರಮ 'ಮನ್ ಕಿ ಬಾತ್'ನಲ್ಲಿ ಪ್ರಧಾನಿ ಮೋದಿ ಇಂದು ಬೆಳಗ್ಗೆ 11 ಗಂಟೆಗೆ ಮಾತನಾಡಲಿದ್ದಾರೆ.</p>.<p>ಈ ಬಗ್ಗೆ ಶನಿವಾರ ರಾತ್ರಿ ಟ್ವೀಟ್ ಮಾಡಿರುವ ಅವರು, ಇಂದು ನಡೆಯುವ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಕೋವಿಡ್-19 ನಿಂದ ದೇಶದಲ್ಲಿ ಉದ್ಬವಿಸಿರುವ ಪರಿಸ್ಥಿತಿಯ ಬಗ್ಗೆ ವಿಶೇಷ ಗಮನ ಹರಿಸುವುದಾಗಿ ತಿಳಿಸಿದ್ದಾರೆ.</p>.<p>'ನಾಳೆ 11 ಕ್ಕೆ ಟ್ಯೂನ್ ಮಾಡಿ. ಕೋವಿಡ್-19 ಸೋಂಕಿನಿಂದ ತಲೆದೋರಿರುವ ಪರಿಸ್ಥಿತಿಯ ಮೇಲೆ ನಾಳಿನ ಕಂತು ಕೇಂದ್ರೀಕೃತವಾಗಿರಲಿದೆ" ಎಂದು ಪ್ರಧಾನಿ ಮೋದಿ ಶನಿವಾರ ರಾತ್ರಿ ಟ್ವೀಟ್ ಮಾಡಿದ್ದಾರೆ.</p>.<p>ಶನಿವಾರ ಒಂದೇ ದಿನ ದೇಶದಲ್ಲಿ 179 ಕೊರೊನಾ ವೈರಾಣು ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಕೋವಿಡ್-19 ಸೋಂಕಿತರ ಒಟ್ಟು ಸಂಖ್ಯೆ 933ಕ್ಕೆ ಏರಿದೆ.</p>.<p>ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದ್ದು, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ, 180 ಪ್ರಕರಣಗಳು ವರದಿಯಾಗಿವೆ. ಕೇರಳದಲ್ಲಿ ಸೋಂಕಿತರ ಸಂಖ್ಯೆ 176ಕ್ಕೆ ಏರಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಜಗತ್ತನೇ ಬೆಚ್ಚಿಬೀಳಿಸಿ ಭಾರತವನ್ನೂ ನಲುಗಿಸುತ್ತಿರುವ ಮಾರಣಾಂತಿಕ ಕೋವಿಡ್-19 ಸೋಂಕಿನ ಬಗ್ಗೆ ತಮ್ಮ ಜನಪ್ರಿಯ ಕಾರ್ಯಕ್ರಮ 'ಮನ್ ಕಿ ಬಾತ್'ನಲ್ಲಿ ಪ್ರಧಾನಿ ಮೋದಿ ಇಂದು ಬೆಳಗ್ಗೆ 11 ಗಂಟೆಗೆ ಮಾತನಾಡಲಿದ್ದಾರೆ.</p>.<p>ಈ ಬಗ್ಗೆ ಶನಿವಾರ ರಾತ್ರಿ ಟ್ವೀಟ್ ಮಾಡಿರುವ ಅವರು, ಇಂದು ನಡೆಯುವ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಕೋವಿಡ್-19 ನಿಂದ ದೇಶದಲ್ಲಿ ಉದ್ಬವಿಸಿರುವ ಪರಿಸ್ಥಿತಿಯ ಬಗ್ಗೆ ವಿಶೇಷ ಗಮನ ಹರಿಸುವುದಾಗಿ ತಿಳಿಸಿದ್ದಾರೆ.</p>.<p>'ನಾಳೆ 11 ಕ್ಕೆ ಟ್ಯೂನ್ ಮಾಡಿ. ಕೋವಿಡ್-19 ಸೋಂಕಿನಿಂದ ತಲೆದೋರಿರುವ ಪರಿಸ್ಥಿತಿಯ ಮೇಲೆ ನಾಳಿನ ಕಂತು ಕೇಂದ್ರೀಕೃತವಾಗಿರಲಿದೆ" ಎಂದು ಪ್ರಧಾನಿ ಮೋದಿ ಶನಿವಾರ ರಾತ್ರಿ ಟ್ವೀಟ್ ಮಾಡಿದ್ದಾರೆ.</p>.<p>ಶನಿವಾರ ಒಂದೇ ದಿನ ದೇಶದಲ್ಲಿ 179 ಕೊರೊನಾ ವೈರಾಣು ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಕೋವಿಡ್-19 ಸೋಂಕಿತರ ಒಟ್ಟು ಸಂಖ್ಯೆ 933ಕ್ಕೆ ಏರಿದೆ.</p>.<p>ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದ್ದು, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ, 180 ಪ್ರಕರಣಗಳು ವರದಿಯಾಗಿವೆ. ಕೇರಳದಲ್ಲಿ ಸೋಂಕಿತರ ಸಂಖ್ಯೆ 176ಕ್ಕೆ ಏರಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>