<p><strong>ನವದೆಹಲಿ</strong>: ಇಲ್ಲಿನ ನಿಜಾಮುದ್ದೀನ್ ಪ್ರದೇಶದ ಮಸೀದಿಯೊಂದರಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ7 ಮಂದಿ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ.</p>.<p>ಧಾರ್ಮಿಕ ಸಭೆಗೆ ಹಾಜರಾದವರಲ್ಲಿ 300 ಜನರಿಗೆ ಕೋವಿಡ್- 19 ಸಂಬಂಧಿಸಿದ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು, 24 ಜನರಲ್ಲಿ ಸೋಂಕು ಇರುವುದು ದೃಢವಾಗಿದೆ.</p>.<p>ಮಸೀದಿ ಇರುವ ಪ್ರದೇಶದಲ್ಲಿ ವ್ಯಾಪಕ ನಿರ್ಬಂಧ ಹೇರಲಾಗಿದ್ದು, 24 ಜನರಲ್ಲಿ ಕೊರೊನಾ ಸೋಂಕು ಇರುವುದು ಕಂಡುಬಂದಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಇಂದು ಬೆಳಗ್ಗೆ ತಿಳಿಸಿದ್ದಾರೆ.</p>.<p>ನೂರಾರು ಜೀವಗಳನ್ನು ಅಪಾಯಕ್ಕೆ ಒಡ್ಡಿದ ಮರ್ಕಜ್ ನಿಜಾಮುದ್ದೀನ್ ಮಸೀದಿ ವಿರುದ್ಧ ಕೇಸು ದಾಖಲಿಸಲು ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ಆದೇಶಿಸಿದ್ದಾರೆ.</p>.<p>ಇವತ್ತು ಬೆಳಿಗ್ಗೆ ತಬ್ಲಿಗಿ ಜಮಾತ್ನ ದೆಹಲಿ ಮುಖ್ಯಾಲಯಕ್ಕೆ ಬೀಗಮುದ್ರೆ ಹಾಕಲಾಗಿದ್ದು, ಆ ಪ್ರದೇಶದ 800 ಮಂದಿಯನ್ನು ಬಸ್ಸುಗಳಲ್ಲಿ ಕರೆದೊಯ್ದು ಕಡ್ಡಾಯವಾಗಿ ಕ್ವಾರಂಟೈನ್ನಲ್ಲಿ ಇಡಲಾಗಿದೆ.</p>.<p>ಮಾ.13 ರಿಂದ 15ರವರೆಗೆ ನಡೆದ ಧಾರ್ಮಿಕ ಸಮಾವೇಶದಲ್ಲಿ ದೇಶ-ವಿದೇಶದ ಪ್ರತಿನಿಧಿಗಳು ಭಾಗಿಯಾಗಿದ್ದರು.</p>.<p>ಈ ಸಮಾವೇಶದಲ್ಲಿ ಭಾಗಿಯಾದವರು ವಿದೇಶಗಳಲ್ಲಿ ಸುತ್ತಾಡಿ, ವಿವಿಧೆಡೆ ಧಾರ್ಮಿಕ ಸಭೆ ನಡೆಸಿದ್ದಾರೆ. ಎಲ್ಲ ರಾಜ್ಯಗಳಿಗೆ ಈ ಕುರಿತು ಸಂದೇಶ ರವಾನಿಸಲಾಗಿದ್ದು, ವ್ಯಕ್ತಿಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.</p>.<p>ಮೃತಪಟ್ಟವರಲ್ಲಿ ತೆಲಂಗಾಣದ ಆರು ಜನ ಮತ್ತು ಶ್ರೀನಗರದ ಓರ್ವ ವ್ಯಕ್ತಿ ಸೇರಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಇಲ್ಲಿನ ನಿಜಾಮುದ್ದೀನ್ ಪ್ರದೇಶದ ಮಸೀದಿಯೊಂದರಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ7 ಮಂದಿ ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ.</p>.<p>ಧಾರ್ಮಿಕ ಸಭೆಗೆ ಹಾಜರಾದವರಲ್ಲಿ 300 ಜನರಿಗೆ ಕೋವಿಡ್- 19 ಸಂಬಂಧಿಸಿದ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು, 24 ಜನರಲ್ಲಿ ಸೋಂಕು ಇರುವುದು ದೃಢವಾಗಿದೆ.</p>.<p>ಮಸೀದಿ ಇರುವ ಪ್ರದೇಶದಲ್ಲಿ ವ್ಯಾಪಕ ನಿರ್ಬಂಧ ಹೇರಲಾಗಿದ್ದು, 24 ಜನರಲ್ಲಿ ಕೊರೊನಾ ಸೋಂಕು ಇರುವುದು ಕಂಡುಬಂದಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಇಂದು ಬೆಳಗ್ಗೆ ತಿಳಿಸಿದ್ದಾರೆ.</p>.<p>ನೂರಾರು ಜೀವಗಳನ್ನು ಅಪಾಯಕ್ಕೆ ಒಡ್ಡಿದ ಮರ್ಕಜ್ ನಿಜಾಮುದ್ದೀನ್ ಮಸೀದಿ ವಿರುದ್ಧ ಕೇಸು ದಾಖಲಿಸಲು ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ಆದೇಶಿಸಿದ್ದಾರೆ.</p>.<p>ಇವತ್ತು ಬೆಳಿಗ್ಗೆ ತಬ್ಲಿಗಿ ಜಮಾತ್ನ ದೆಹಲಿ ಮುಖ್ಯಾಲಯಕ್ಕೆ ಬೀಗಮುದ್ರೆ ಹಾಕಲಾಗಿದ್ದು, ಆ ಪ್ರದೇಶದ 800 ಮಂದಿಯನ್ನು ಬಸ್ಸುಗಳಲ್ಲಿ ಕರೆದೊಯ್ದು ಕಡ್ಡಾಯವಾಗಿ ಕ್ವಾರಂಟೈನ್ನಲ್ಲಿ ಇಡಲಾಗಿದೆ.</p>.<p>ಮಾ.13 ರಿಂದ 15ರವರೆಗೆ ನಡೆದ ಧಾರ್ಮಿಕ ಸಮಾವೇಶದಲ್ಲಿ ದೇಶ-ವಿದೇಶದ ಪ್ರತಿನಿಧಿಗಳು ಭಾಗಿಯಾಗಿದ್ದರು.</p>.<p>ಈ ಸಮಾವೇಶದಲ್ಲಿ ಭಾಗಿಯಾದವರು ವಿದೇಶಗಳಲ್ಲಿ ಸುತ್ತಾಡಿ, ವಿವಿಧೆಡೆ ಧಾರ್ಮಿಕ ಸಭೆ ನಡೆಸಿದ್ದಾರೆ. ಎಲ್ಲ ರಾಜ್ಯಗಳಿಗೆ ಈ ಕುರಿತು ಸಂದೇಶ ರವಾನಿಸಲಾಗಿದ್ದು, ವ್ಯಕ್ತಿಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.</p>.<p>ಮೃತಪಟ್ಟವರಲ್ಲಿ ತೆಲಂಗಾಣದ ಆರು ಜನ ಮತ್ತು ಶ್ರೀನಗರದ ಓರ್ವ ವ್ಯಕ್ತಿ ಸೇರಿದ್ದಾರೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>