<p><strong>ನವದೆಹಲಿ:</strong> ಈವರೆಗೂ 45,000ಕ್ಕೂ ಹೆಚ್ಚು ಭಾರತೀಯರು ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿದೇಶದಿಂದ ಮರಳಿದ್ದು, ಜೂನ್ 13 ರವರೆಗೆ 1,00,000 ಜನರನ್ನು ಭಾರತಕ್ಕೆ ಕರೆತರಲಾಗುವುದು ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ.</p>.<p>ಲ್ಯಾಟಿನ್ ಅಮೆರಿಕ, ಕೆರಿಬಿಯನ್, ಆಫ್ರಿಕಾ ಮತ್ತು ಯುರೋಪಿನ ಕೆಲವು ಭಾಗಗಳಲ್ಲಿ ಉಳಿದುಕೊಂಡಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.</p>.<p>'ಭಾರತಕ್ಕೆ ಹಾರಾಟ ನಡೆಸುತ್ತಿರುವ ವಿದೇಶಿ ವಿಮಾನಗಳ ಸಹಾಯ ಪಡೆದುಕೊಳ್ಳುವ ಮೂಲಕ ಈ ಕಾರ್ಯವನ್ನು ಮಾಡಲಾಗುತ್ತಿದೆ' ಎಂದು ಅವರು ಆನ್ಲೈನ್ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<p>ಗುರುವಾರ ಮಧ್ಯಾಹ್ನದವರೆಗೆ ಒಟ್ಟು 45,216 ಭಾರತೀಯರನ್ನು ಮರಳಿ ಕರೆತರಲಾಯಿತು. ಅವರಲ್ಲಿ 8,069 ವಲಸೆ ಕಾರ್ಮಿಕರು, 7,656 ವಿದ್ಯಾರ್ಥಿಗಳು ಮತ್ತು 5,107 ವೃತ್ತಿಪರರು ಸೇರಿದ್ದಾರೆ ಎಂದು ಶ್ರೀವಾಸ್ತವ ಹೇಳಿದ್ದಾರೆ. </p>.<p>ಸುಮಾರು 5,000 ಭಾರತೀಯರು ನೇಪಾಳ ಮತ್ತು ಬಾಂಗ್ಲಾದೇಶದಿಂದ ಭೂ ಗಡಿಯ ಮೂಲಕ ಮರಳಿದ್ದಾರೆ ಎಂದು ಅವರು ದೃಢಪಡಿಸಿದ್ದಾರೆ.</p>.<p>ಮೇ 7ರಂದು ವಂದೇ ಭಾರತ್ ಮಿಷನ್ ಕಾರ್ಯಾಚರಣೆಯ ಮೊದಲ ಹಂತವನ್ನು ಆರಂಭಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಈವರೆಗೂ 45,000ಕ್ಕೂ ಹೆಚ್ಚು ಭಾರತೀಯರು ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿದೇಶದಿಂದ ಮರಳಿದ್ದು, ಜೂನ್ 13 ರವರೆಗೆ 1,00,000 ಜನರನ್ನು ಭಾರತಕ್ಕೆ ಕರೆತರಲಾಗುವುದು ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ.</p>.<p>ಲ್ಯಾಟಿನ್ ಅಮೆರಿಕ, ಕೆರಿಬಿಯನ್, ಆಫ್ರಿಕಾ ಮತ್ತು ಯುರೋಪಿನ ಕೆಲವು ಭಾಗಗಳಲ್ಲಿ ಉಳಿದುಕೊಂಡಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.</p>.<p>'ಭಾರತಕ್ಕೆ ಹಾರಾಟ ನಡೆಸುತ್ತಿರುವ ವಿದೇಶಿ ವಿಮಾನಗಳ ಸಹಾಯ ಪಡೆದುಕೊಳ್ಳುವ ಮೂಲಕ ಈ ಕಾರ್ಯವನ್ನು ಮಾಡಲಾಗುತ್ತಿದೆ' ಎಂದು ಅವರು ಆನ್ಲೈನ್ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<p>ಗುರುವಾರ ಮಧ್ಯಾಹ್ನದವರೆಗೆ ಒಟ್ಟು 45,216 ಭಾರತೀಯರನ್ನು ಮರಳಿ ಕರೆತರಲಾಯಿತು. ಅವರಲ್ಲಿ 8,069 ವಲಸೆ ಕಾರ್ಮಿಕರು, 7,656 ವಿದ್ಯಾರ್ಥಿಗಳು ಮತ್ತು 5,107 ವೃತ್ತಿಪರರು ಸೇರಿದ್ದಾರೆ ಎಂದು ಶ್ರೀವಾಸ್ತವ ಹೇಳಿದ್ದಾರೆ. </p>.<p>ಸುಮಾರು 5,000 ಭಾರತೀಯರು ನೇಪಾಳ ಮತ್ತು ಬಾಂಗ್ಲಾದೇಶದಿಂದ ಭೂ ಗಡಿಯ ಮೂಲಕ ಮರಳಿದ್ದಾರೆ ಎಂದು ಅವರು ದೃಢಪಡಿಸಿದ್ದಾರೆ.</p>.<p>ಮೇ 7ರಂದು ವಂದೇ ಭಾರತ್ ಮಿಷನ್ ಕಾರ್ಯಾಚರಣೆಯ ಮೊದಲ ಹಂತವನ್ನು ಆರಂಭಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>