<p><strong>ಮುಂಬೈ:</strong>ಮಹಾರಾಷ್ಟ್ರದಲ್ಲಿ ಒಂದೇ ದಿನ 25 ಕೊರೊನಾ ವೈರಸ್ ಸೋಂಕಿತರು ಮೃತಪಟ್ಟಿದ್ದಾರೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಮೃತರಾದವರ ಸಂಖ್ಯೆ 97ಕ್ಕೆ ತಲುಪಿದೆ. </p>.<p>ಕೊರೊನಾ ಸೋಂಕು ಸಂಬಂಧಿತ ಹೆಚ್ಚಿನ ಸಾವುಗಳು ಮುಂಬೈ-ಪುಣೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸಂಭವಿಸಿವೆ.</p>.<p>ಮಹಾರಾಷ್ಟ್ರದಲ್ಲಿ ಗುರುವಾರ 229 ಹೊಸ ಪ್ರಕರಣಗಳು ದಾಖಲಾಗುವ ಮೂಲಕ ಕೊರೊನಾ ಸೋಂಕು ಪೀಡಿತರ ಸಂಖ್ಯೆ 1,135ಕ್ಕೆ ತಲುಪಿದೆ. ಇದರಲ್ಲಿ ಶೇ.50 ರಷ್ಟು ಪ್ರಕರಣಗಳು ಮುಂಬೈ ಮಹಾನಗರ ವ್ಯಾಪ್ತಿಯಲ್ಲಿ ಕಂಡುಬಂದಿವೆ.</p>.<p>ಹೊಸದಾಗಿ ಮೃತಪಟ್ಟವರಲ್ಲಿ ಮುಂಬೈ ಮಹಾನಗರ ವ್ಯಾಪ್ತಿಯಲ್ಲಿ 9 ಮಂದಿ ಮತ್ತು ಪುಣೆ ಜಿಲ್ಲೆಯಲ್ಲಿ 14 ಜನರು ಸೇರಿದ್ದಾರೆ. ಸಾವಿಗೀಡಾದವರಲ್ಲಿ 12 ಮಂದಿ ಹಿರಿಯ ನಾಗರಿಕರಾಗಿದ್ದಾರೆ.</p>.<p>ಮುಂಬೈ ನಗರದ ಧಾರಾವಿ ಮತ್ತು ವಾರ್ಲಿ ಪ್ರದೇಶಗಳು ಕೊರೊನಾ ವೈರಸ್ ಸೋಂಕಿನ ಹಾಟ್ಸ್ಪಾಟ್ಗಳಾಗಿ ಮಾರ್ಪಟ್ಟಿವೆ.</p>.<p>ಹದಗೆಡುತ್ತಿರುವ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಅಲ್ಲಿನ ಸರ್ಕಾರ ಕೆಲ ಪ್ರದೇಶಗಳಲ್ಲಿ ಕರ್ಪ್ಯೂ ಜಾರಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong>ಮಹಾರಾಷ್ಟ್ರದಲ್ಲಿ ಒಂದೇ ದಿನ 25 ಕೊರೊನಾ ವೈರಸ್ ಸೋಂಕಿತರು ಮೃತಪಟ್ಟಿದ್ದಾರೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಮೃತರಾದವರ ಸಂಖ್ಯೆ 97ಕ್ಕೆ ತಲುಪಿದೆ. </p>.<p>ಕೊರೊನಾ ಸೋಂಕು ಸಂಬಂಧಿತ ಹೆಚ್ಚಿನ ಸಾವುಗಳು ಮುಂಬೈ-ಪುಣೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸಂಭವಿಸಿವೆ.</p>.<p>ಮಹಾರಾಷ್ಟ್ರದಲ್ಲಿ ಗುರುವಾರ 229 ಹೊಸ ಪ್ರಕರಣಗಳು ದಾಖಲಾಗುವ ಮೂಲಕ ಕೊರೊನಾ ಸೋಂಕು ಪೀಡಿತರ ಸಂಖ್ಯೆ 1,135ಕ್ಕೆ ತಲುಪಿದೆ. ಇದರಲ್ಲಿ ಶೇ.50 ರಷ್ಟು ಪ್ರಕರಣಗಳು ಮುಂಬೈ ಮಹಾನಗರ ವ್ಯಾಪ್ತಿಯಲ್ಲಿ ಕಂಡುಬಂದಿವೆ.</p>.<p>ಹೊಸದಾಗಿ ಮೃತಪಟ್ಟವರಲ್ಲಿ ಮುಂಬೈ ಮಹಾನಗರ ವ್ಯಾಪ್ತಿಯಲ್ಲಿ 9 ಮಂದಿ ಮತ್ತು ಪುಣೆ ಜಿಲ್ಲೆಯಲ್ಲಿ 14 ಜನರು ಸೇರಿದ್ದಾರೆ. ಸಾವಿಗೀಡಾದವರಲ್ಲಿ 12 ಮಂದಿ ಹಿರಿಯ ನಾಗರಿಕರಾಗಿದ್ದಾರೆ.</p>.<p>ಮುಂಬೈ ನಗರದ ಧಾರಾವಿ ಮತ್ತು ವಾರ್ಲಿ ಪ್ರದೇಶಗಳು ಕೊರೊನಾ ವೈರಸ್ ಸೋಂಕಿನ ಹಾಟ್ಸ್ಪಾಟ್ಗಳಾಗಿ ಮಾರ್ಪಟ್ಟಿವೆ.</p>.<p>ಹದಗೆಡುತ್ತಿರುವ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಅಲ್ಲಿನ ಸರ್ಕಾರ ಕೆಲ ಪ್ರದೇಶಗಳಲ್ಲಿ ಕರ್ಪ್ಯೂ ಜಾರಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>