'ಪಿಎಂ-ಕೇರ್ಸ್' ನಿಧಿಗೆ ₹501 ರು. ನೀಡಿದ್ದನ್ನು ಸಯ್ಯದ್ ಅತೂರ್ ರಹೆಮಾನ್ ಎಂಬುವವರು ಟ್ವಿಟ್ ಮೂಲಕ ಹಂಚಿಕೊಂಡಿದ್ದಾರೆ. ಇದಕ್ಕೆ ಪ್ರಧಾನಿ ಮೋದಿಯವರ ಅಧಿಕೃತ ಖಾತೆಯಿಂದ ಪ್ರತಿಕ್ರಿಯೆ ನೀಡಲಾಗಿದ್ದು, 'ಕಡಿಮೆ ಮತ್ತು ದೊಡ್ಡ ಮೊತ್ತ ಅಂತೇನಿಲ್ಲ. ಇಲ್ಲಿ ಪ್ರತಿಯೊಬ್ಬರ ಕೊಡುಗೆ ಮುಖ್ಯವಾಗಿದೆ. ಇದು ನಮ್ಮ ಸಾಮೂಹಿಕ ಸಂಕಲ್ಪವನ್ನು ತೋರಿಸುತ್ತದೆ' ಎಂದಿದ್ದಾರೆ.