ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌-19 ಹಿನ್ನೆಲೆ: 80 ದಿನಗಳ ನಂತರ ತಿರುಮಲ ದೇಗುಲಕ್ಕೆ ಭಕ್ತರ ಪ್ರವೇಶ

Last Updated 11 ಜೂನ್ 2020, 9:06 IST
ಅಕ್ಷರ ಗಾತ್ರ

ತಿರುಪತಿ: ಕೋವಿಡ್‌-19 ಹಿನ್ನೆಲೆಯಲ್ಲಿ ಸುಮಾರು 80 ದಿನಗಳ ಕಾಲ ಮುಚ್ಚಲ್ಪಟ್ಟಿದ್ದ ತಿರುಮಲ ವೆಂಕಟೇಶ್ವರ ದೇವಸ್ಥಾನದ ಬಾಗಿಲುಗಳನ್ನು ತೆರೆಯಲಾಗಿದ್ದು ಸಾಮಾನ್ಯ ಭಕ್ತರ ದರ್ಶನಕ್ಕೆ ಗುರುವಾರ ಅವಕಾಶ ಕಲ್ಪಿಸಲಾಗಿದೆ.

ದರ್ಶನಕ್ಕೆ ತೆರಳಿದ್ದ ಭಕ್ತರು ಮಾಸ್ಕ್‌ ಧರಿಸುವುದು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವುದನ್ನು ಒಳಗೊಂಡಂತೆ ಮುಂತಾದ ಕಟ್ಟುನಿಟ್ಟಿನ ಕ್ರಮಗಳನ್ನು ದೇವಸ್ಥಾನದ ಅಧಿಕಾರಿಗಳು ಕೈಗೊಂಡಿದ್ದಾರೆ.

ಭಕ್ತರನ್ನು ನಿಯಂತ್ರಿಸಲು ಮತ್ತು ಜನದಟ್ಟಣೆ ತಡೆಗಟ್ಟಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಾಡಿಕೊಂಡಿದೆ.

ಜೂನ್ 8 ರಂದು ದೇವಾಲಯವನ್ನು ಪುನಃ ತೆರೆಯಲಾಗಿತ್ತು. ಆದರೆ, ದೇವಾಲಯದ ಅಧಿಕಾರಿಗಳು ಮೊದಲ ಎರಡು ದಿನ ಟಿಟಿಡಿ ನೌಕರರು ಮತ್ತು ಅವರ ಕುಟುಂಬ ಸದಸ್ಯರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಿದ್ದರು. ಮೂರನೇ ದಿನ ಸ್ಥಳೀಯ ಭಕ್ತರಿಗೆ ಮಾತ್ರ ಅನುಮತಿ ನೀಡುವ ಮೂಲಕ ಪ್ರಯೋಗ ನಡೆಸಿದ್ದರು.

ಪ್ರಾಯೋಗಿಕ ಚಾಲನೆಯಲ್ಲಿನ ಲೋಪದೋಷಗಳನ್ನು ಗುರುತಿಸಿ, ಅವುಗಳನ್ನು ಸರಿಪಡಿಸಿಕೊಂಡ ನಂತರ, ಟಿಟಿಡಿ ಇಂದು ಸಾಮಾನ್ಯ ಭಕ್ತರಿಗೆ ದೇವಾಲಯದ ಬಾಗಿಲು ತೆರೆಯಿತು.

ಪ್ರತಿದಿನ 6,000 ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಟಿಟಿಡಿ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT