ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರುಮತದಾನಕ್ಕೆ ಸಿಪಿಎಂ ಆಗ್ರಹ

Last Updated 21 ಮೇ 2019, 19:41 IST
ಅಕ್ಷರ ಗಾತ್ರ

ನವದೆಹಲಿ: ‘ಪಶ್ಚಿಮಬಂಗಾಳದ ಡೈಮಂಡ್ ಹಾರ್ಬರ್‌ ಕ್ಷೇತ್ರದಲ್ಲಿ ಮೇ 19ರಂದು ನಡೆದ ಮತದಾನದಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿದ್ದು, ಮರು ಮತದಾನ ನಡೆಸಲು ಸಿಪಿಎಂ ಆಗ್ರಹಪಡಿಸಿದೆ.

ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್‌ ಯೆಚೂರಿ ಅವರು ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ‘ದೊಡ್ಡ ಪ್ರಮಾಣದ ಅಕ್ರಮ ನಡೆದಿದ್ದು, ಸಂವಿಧಾನದ 324ನೇ ವಿಧಿ ಜಾರಿಗೊಳಿಸಬೇಕು’ ಎಂದು ಕೋರಿದ್ದಾರೆ. ಈ ವಿಧಿಯ ಅಡಿಯಲ್ಲಿ ಆಡಳಿತ ಯಂತ್ರವನ್ನು ನೇರವಾಗಿ ಆಯೋಗದ ನಿಯಂತ್ರಣಕ್ಕೆ ತೆಗೆದುಕೊಳ್ಳುವುದಕ್ಕೆ ಅವಕಾಶ ಇದೆ.

ಈ ಕ್ಷೇತ್ರದಲ್ಲಿಯೇ ಮರುಮತದಾನ ನಡೆಸಲು ಆದೇಶಿಸಬೇಕು ಎಂದು ಕೋರಿ ಬಿಜೆಪಿ ಕೂಡ ಮನವಿ ಸಲ್ಲಿಸಿದೆ. ಮುಖ್ಯಮಂತ್ರಿಯ ಸೋದರಳಿಯ ಅಭಿಷೇಕ್‌ ಬ್ಯಾನರ್ಜಿ ಈ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿಯಾಗಿದ್ದು, ಇವರ ಗೆಲುವಿಗಾಗಿ ಬಿಜೆಪಿ ಜೊತೆಗೆ ಒಳಒಪ್ಪಂದ ಆಗಿರುವುದು ಸ್ಪಷ್ಟವಾಗಿದೆ ಎಂದು ಸಿಪಿಎಂ ಆರೋಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT