ನವದೆಹಲಿ: ಇಲ್ಲಿನ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಮೇಲೆ ನಡೆದ ಪೊಲೀಸ್ ದಾಳಿ ಜಲಿಯನ್ವಾಲಾ ಬಾಗ್ ಹತ್ಯಾಕಾಂಡವನ್ನು ನೆನಪಿಸುತ್ತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಜಾಮಿಯಾ ಮಿಲಿಯಾ ವಿವಿ ಆವರಣದಲ್ಲಿ ರವಿವಾರ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದರು.
ದೆಹಲಿ ಪೊಲೀಸರ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಉದ್ದವ್ ಠಾಕ್ರೆ ಅವರು ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಜಲಿಯನ್ವಾಲಾ ಬಾಗ್ ಹತ್ಯಾಕಾಂಡವನ್ನು ನೆನಪಿಸಿಕೊಂಡರು.
Maharashtra CM Uddhav Thackeray: What happened at Jamia Millia Islamia, is like Jallianwala Bagh. Students are like a 'Yuva bomb'. So we request the central government to not do, what they are doing, with students. pic.twitter.com/lNGrgCPrIU
‘ನನಗೆ ಈ ವೇಳೆ ಜಲಿಯನ್ವಾಲಾ ಬಾಗ್ ದುರಂತ ನೆನಪಾಗುತ್ತಿದೆ. ಯುವ ಶಕ್ತಿಯು ಬಾಂಬ್ ಇದ್ದಂತೆ. ಅದನ್ನು ಹೊತ್ತಿಸುವ ಕೆಲಸ ಮಾಡಬೇಡಿ‘ ಎಂದು ಕೇಂದ್ರ ಸರ್ಕಾರದ ವಿರುದ್ಧ ಉದ್ದವ್ ಠಾಕ್ರೆ ವಾಗ್ದಾಳಿ ನಡೆಸಿದರು.