<p><strong>ಕೊಲಂಬೊ:</strong> ಶ್ರೀಲಂಕಾದಲ್ಲಿನ ಸದ್ಯದ ರಾಜಕೀಯ ಬಿಕ್ಕಟ್ಟಿಗೆ ಬಾಹ್ಯ ಮತ್ತು ಸ್ಥಳೀಯ ಮೌಲ್ಯಗಳ ನಡುವಿನ ಸಂಘರ್ಷವೇ ಕಾರಣ ಎಂದು ಹೇಳಿರುವ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ‘ವಿದೇಶಿ ಶಕ್ತಿಗಳು ನನಗೆ ಬೆದರಿಕೆ ಒಡ್ಡುತ್ತಿವೆ’ ಎಂದು ಆರೋಪಿಸಿದ್ದಾರೆ.</p>.<p>‘ವಿದೇಶಿ ಶಕ್ತಿಗಳಿಗೆ ಅವಕಾಶ ನೀಡದೆ ನಾನು ರಾಷ್ಟ್ರೀಯವಾದದ ತತ್ವಗಳ ಅನುಸಾರ ಕ್ರಮ ಕೈಗೊಂಡಿದ್ದೇನೆ. ಹೀಗಾಗಿ, ಈ ಶಕ್ತಿಗಳು ಸವಾಲಾಗಿ ಪರಿಣಮಿಸಿವೆ. ಹಳೆಯ ಸಾಮ್ರಾಜ್ಯಶಾಹಿ ನಿಲುವಿನ ನೆರಳು ನಮ್ಮ ದಾರಿಯಲ್ಲಿ ನಿಂತಿದೆ’ ಎಂದು ಯಾವುದೇ ದೇಶದ ಹೆಸರು ಹೇಳದೆ ಸಿರಿಸೇನಾ ಆಕ್ಷೇಪಿಸಿದ್ದಾರೆ.</p>.<p>ಸಂಸತ್ತನ್ನು ವಿಸರ್ಜನೆ ಮಾಡಿ ತಾವು ಅಧಿಸೂಚನೆ ಹೊರಡಿಸಿದ್ದರ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧವಿರುವುದಾಗಿ ಅವರು ಹೇಳಿದ್ದಾರೆ.</p>.<p>ಪ್ರಧಾನಿಯಾಗಿದ್ದ ರನಿಲ್ ವಿಕ್ರಮಸಿಂಘೆ ಅವರನ್ನು ಪದಚ್ಯುತಗೊಳಿಸಿ ಆ ಹುದ್ದೆಗೆ ಮಹಿಂದಾ ರಾಜಪಕ್ಸೆ ಅವರನ್ನು ಸಿರಿಸೇನಾ ಈ ವರ್ಷದ ಅಕ್ಟೋಬರ್ನಲ್ಲಿ ನೇಮಕ ಮಾಡಿದ ನಂತರ ದೇಶದಲ್ಲಿ ರಾಜಕೀಯ ಸಂಘರ್ಷ ಆರಂಭವಾಗಿದೆ.</p>.<p><strong>‘ಕಾಶ್ಮೀರದ ಜನರಿಗೆ ಪಾಕ್ ಬೆಂಬಲ’</strong></p>.<p><strong>ಇಸ್ಲಾಮಾಬಾದ್:</strong> ಜಮ್ಮು ಮತ್ತು ಕಾಶ್ಮೀರದ ಜನರಿಗೆ ರಾಜತಾಂತ್ರಿಕ, ರಾಜಕೀಯ ಹಾಗೂ ನೈತಿಕ ಬೆಂಬಲ ನೀಡುವುದನ್ನು ಪಾಕಿಸ್ತಾನ ಮುಂದುವರಿಸುತ್ತದೆ ಎಂದು ಪ್ರಧಾನಿ ಇಮ್ರಾನ್ ಖಾನ್ ಸೋಮವಾರ ತಿಳಿಸಿದ್ದಾರೆ.</p>.<p>ಮಾನವ ಹಕ್ಕುಗಳ ದಿನಾಚರಣೆ ವೇಳೆ ಅವರು ಈ ಹೇಳಿಕೆ ನೀಡಿದ್ದಾರೆ.</p>.<p>‘ಇಂದು ಮಾನವ ಹಕ್ಕುಗಳ ಜಾಗತಿಕ ಘೋಷಣೆಯ 70ನೇ ವರ್ಷ ಆಚರಣೆಯ ದಿನ. ಘನತೆ, ಗೌರವ<br />ಯುತ ಜೀವನಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಜನರು ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಸಂಪೂರ್ಣಬೆಂಬಲ ಇರಲಿದೆ ಎಂದು ಈ ದಿನ ಪುನರುಚ್ಚರಿಸುತ್ತಿದ್ದೇವೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ:</strong> ಶ್ರೀಲಂಕಾದಲ್ಲಿನ ಸದ್ಯದ ರಾಜಕೀಯ ಬಿಕ್ಕಟ್ಟಿಗೆ ಬಾಹ್ಯ ಮತ್ತು ಸ್ಥಳೀಯ ಮೌಲ್ಯಗಳ ನಡುವಿನ ಸಂಘರ್ಷವೇ ಕಾರಣ ಎಂದು ಹೇಳಿರುವ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ‘ವಿದೇಶಿ ಶಕ್ತಿಗಳು ನನಗೆ ಬೆದರಿಕೆ ಒಡ್ಡುತ್ತಿವೆ’ ಎಂದು ಆರೋಪಿಸಿದ್ದಾರೆ.</p>.<p>‘ವಿದೇಶಿ ಶಕ್ತಿಗಳಿಗೆ ಅವಕಾಶ ನೀಡದೆ ನಾನು ರಾಷ್ಟ್ರೀಯವಾದದ ತತ್ವಗಳ ಅನುಸಾರ ಕ್ರಮ ಕೈಗೊಂಡಿದ್ದೇನೆ. ಹೀಗಾಗಿ, ಈ ಶಕ್ತಿಗಳು ಸವಾಲಾಗಿ ಪರಿಣಮಿಸಿವೆ. ಹಳೆಯ ಸಾಮ್ರಾಜ್ಯಶಾಹಿ ನಿಲುವಿನ ನೆರಳು ನಮ್ಮ ದಾರಿಯಲ್ಲಿ ನಿಂತಿದೆ’ ಎಂದು ಯಾವುದೇ ದೇಶದ ಹೆಸರು ಹೇಳದೆ ಸಿರಿಸೇನಾ ಆಕ್ಷೇಪಿಸಿದ್ದಾರೆ.</p>.<p>ಸಂಸತ್ತನ್ನು ವಿಸರ್ಜನೆ ಮಾಡಿ ತಾವು ಅಧಿಸೂಚನೆ ಹೊರಡಿಸಿದ್ದರ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧವಿರುವುದಾಗಿ ಅವರು ಹೇಳಿದ್ದಾರೆ.</p>.<p>ಪ್ರಧಾನಿಯಾಗಿದ್ದ ರನಿಲ್ ವಿಕ್ರಮಸಿಂಘೆ ಅವರನ್ನು ಪದಚ್ಯುತಗೊಳಿಸಿ ಆ ಹುದ್ದೆಗೆ ಮಹಿಂದಾ ರಾಜಪಕ್ಸೆ ಅವರನ್ನು ಸಿರಿಸೇನಾ ಈ ವರ್ಷದ ಅಕ್ಟೋಬರ್ನಲ್ಲಿ ನೇಮಕ ಮಾಡಿದ ನಂತರ ದೇಶದಲ್ಲಿ ರಾಜಕೀಯ ಸಂಘರ್ಷ ಆರಂಭವಾಗಿದೆ.</p>.<p><strong>‘ಕಾಶ್ಮೀರದ ಜನರಿಗೆ ಪಾಕ್ ಬೆಂಬಲ’</strong></p>.<p><strong>ಇಸ್ಲಾಮಾಬಾದ್:</strong> ಜಮ್ಮು ಮತ್ತು ಕಾಶ್ಮೀರದ ಜನರಿಗೆ ರಾಜತಾಂತ್ರಿಕ, ರಾಜಕೀಯ ಹಾಗೂ ನೈತಿಕ ಬೆಂಬಲ ನೀಡುವುದನ್ನು ಪಾಕಿಸ್ತಾನ ಮುಂದುವರಿಸುತ್ತದೆ ಎಂದು ಪ್ರಧಾನಿ ಇಮ್ರಾನ್ ಖಾನ್ ಸೋಮವಾರ ತಿಳಿಸಿದ್ದಾರೆ.</p>.<p>ಮಾನವ ಹಕ್ಕುಗಳ ದಿನಾಚರಣೆ ವೇಳೆ ಅವರು ಈ ಹೇಳಿಕೆ ನೀಡಿದ್ದಾರೆ.</p>.<p>‘ಇಂದು ಮಾನವ ಹಕ್ಕುಗಳ ಜಾಗತಿಕ ಘೋಷಣೆಯ 70ನೇ ವರ್ಷ ಆಚರಣೆಯ ದಿನ. ಘನತೆ, ಗೌರವ<br />ಯುತ ಜೀವನಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಜನರು ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಸಂಪೂರ್ಣಬೆಂಬಲ ಇರಲಿದೆ ಎಂದು ಈ ದಿನ ಪುನರುಚ್ಚರಿಸುತ್ತಿದ್ದೇವೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>