<p><strong>ರಾಂಚಿ: </strong>ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್ಟೆಬಲ್,ತನ್ನ ಇಬ್ಬರು ಮೇಲಧಿಕಾರಿಗಳನ್ನು ಗುಂಡು ಹಾರಿಸಿ ಕೊಂದಿರುವ ಘಟನೆ ಬೊಕಾರೊ ಪಟ್ಟಣದಲ್ಲಿ ಸೋಮವಾರನಡೆದಿದೆ. ಗುಂಡು ತಲುಗಿ ಮತ್ತೊಬ್ಬ ಅಧಿಕಾರಿ ಗಾಯಗೊಂಡಿದ್ದಾರೆ.</p>.<p>ಸಿಆರ್ಪಿಎಫ್ನ 226ನೇ ಬೆಟಾಲಿಯನ್ನ ಕಾನ್ಸ್ಟೆಬಲ್ ಪಾನಮತ್ತನಾಗಿ ಅಸಿಸ್ಟೆಂಟ್ ಕಮಾಂಡೆಂಡ್ ಮತ್ತು ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಅವರತ್ತ ಸೋಮವಾರ ರಾತ್ರಿ 9.30ಕ್ಕೆಗುಂಡು ಹಾರಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಗುಂಡು ಹಾರಿಸಲು ಕಾರಣವೇನೆಂದು ತಿಳಿದುಬಂದಿಲ್ಲ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.</p>.<p>ರಾಂಚಿಯಲ್ಲಿ ಸೋಮವಾರ ನಡೆದ ಇಂಥದ್ದೇ ಮತ್ತೊಂದು ಪ್ರಕರಣದಲ್ಲಿ ಛತ್ತೀಸಗಡ ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೆಬಲ್ ಒಬ್ಬರು ಕಂಪನಿ ಕಮಾಂಡರ್ ಮೇಲೆ ಗುಂಡು ಹಾರಿಸಿ, ತಾವೂ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<p>ಕಳೆದ ವಾರ ಛತ್ತೀಸಗಡದ ನಾರಾಯಣಪುರ ಜಿಲ್ಲೆಯಲ್ಲಿರುವಇಂಡೊ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಶಿಬಿರದಲ್ಲಿ ಕಾನ್ಸ್ಟೆಬಲ್ ಒಬ್ಬರು ಗುಂಡು ಹಾರಿಸಿ ಐವರು ಸಹೋದ್ಯೋಗಿಗಳನ್ನು ಕೊಂದಿದ್ದರು. ಸ್ವಲ್ಪ ಹೊತ್ತಿನಲ್ಲಿಯೇ ಇತರರು ಗುಂಡು ಹಾರಿಸಿ ಅವರನ್ನು ಕೊಂದಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/chhattisgarh-six-itbp-jawans-killed-in-kadenar-camp-687553.html" target="_blank">ಐಟಿಬಿಪಿಶಿಬಿರದಲ್ಲಿ ಕಿತ್ತಾಟ: 6 ಸಿಬ್ಬಂದಿ ಸಾವು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ: </strong>ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್ಟೆಬಲ್,ತನ್ನ ಇಬ್ಬರು ಮೇಲಧಿಕಾರಿಗಳನ್ನು ಗುಂಡು ಹಾರಿಸಿ ಕೊಂದಿರುವ ಘಟನೆ ಬೊಕಾರೊ ಪಟ್ಟಣದಲ್ಲಿ ಸೋಮವಾರನಡೆದಿದೆ. ಗುಂಡು ತಲುಗಿ ಮತ್ತೊಬ್ಬ ಅಧಿಕಾರಿ ಗಾಯಗೊಂಡಿದ್ದಾರೆ.</p>.<p>ಸಿಆರ್ಪಿಎಫ್ನ 226ನೇ ಬೆಟಾಲಿಯನ್ನ ಕಾನ್ಸ್ಟೆಬಲ್ ಪಾನಮತ್ತನಾಗಿ ಅಸಿಸ್ಟೆಂಟ್ ಕಮಾಂಡೆಂಡ್ ಮತ್ತು ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಅವರತ್ತ ಸೋಮವಾರ ರಾತ್ರಿ 9.30ಕ್ಕೆಗುಂಡು ಹಾರಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಗುಂಡು ಹಾರಿಸಲು ಕಾರಣವೇನೆಂದು ತಿಳಿದುಬಂದಿಲ್ಲ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.</p>.<p>ರಾಂಚಿಯಲ್ಲಿ ಸೋಮವಾರ ನಡೆದ ಇಂಥದ್ದೇ ಮತ್ತೊಂದು ಪ್ರಕರಣದಲ್ಲಿ ಛತ್ತೀಸಗಡ ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೆಬಲ್ ಒಬ್ಬರು ಕಂಪನಿ ಕಮಾಂಡರ್ ಮೇಲೆ ಗುಂಡು ಹಾರಿಸಿ, ತಾವೂ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<p>ಕಳೆದ ವಾರ ಛತ್ತೀಸಗಡದ ನಾರಾಯಣಪುರ ಜಿಲ್ಲೆಯಲ್ಲಿರುವಇಂಡೊ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಶಿಬಿರದಲ್ಲಿ ಕಾನ್ಸ್ಟೆಬಲ್ ಒಬ್ಬರು ಗುಂಡು ಹಾರಿಸಿ ಐವರು ಸಹೋದ್ಯೋಗಿಗಳನ್ನು ಕೊಂದಿದ್ದರು. ಸ್ವಲ್ಪ ಹೊತ್ತಿನಲ್ಲಿಯೇ ಇತರರು ಗುಂಡು ಹಾರಿಸಿ ಅವರನ್ನು ಕೊಂದಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/chhattisgarh-six-itbp-jawans-killed-in-kadenar-camp-687553.html" target="_blank">ಐಟಿಬಿಪಿಶಿಬಿರದಲ್ಲಿ ಕಿತ್ತಾಟ: 6 ಸಿಬ್ಬಂದಿ ಸಾವು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>