ಜಮ್ಮು ಕಾಶ್ಮೀರ ಬ್ಯಾಂಕಿನ ಸೇವಾ ಕೇಂದ್ರವನ್ನು ನಡೆಸುತ್ತಿದ್ದ ಪೀರ್ ಮೆಹ್ರಾಜುದ್ದೀನ್, ಕೆಲಸದ ನಿಮಿತ್ತ ಶ್ರೀನಗರಕ್ಕೆ ತೆರಳುತ್ತಿದ್ದ. ಆತ ಚೆಕ್ಪೋಸ್ಟ್ನಲ್ಲಿ ವಾಹನ ನಿಲ್ಲಿಸದೇ ಹೊರಟಿದ್ದು ನಿಜವಾಗಿದ್ದರೆ ಆತನ ಕಾರಿನ ಟೈರ್ಗಳಿಗೆ ಗುಂಡು ಹಾರಿಸಬಹುದಿತ್ತು. ಆದರೆ ಆತನನ್ನು ಅಮಾನವೀಯವಾಗಿ ಗುಂಡಿಟ್ಟು ಕೊಲ್ಲಲಾಗಿದೆ ಎಂದು ಬೀರ್ವಾ ಪ್ರದೇಶದ ನಿವಾಸಿ ಮೊಹಮ್ಮದ್ ಆಶ್ರಫ್ ಆರೋಪಿಸಿದರು.