ಶನಿವಾರ ಇಲ್ಲಿ ನಾಲ್ಕು ತಾಸು ನಡೆದಸಭೆಯಲ್ಲಿ ರಾಹುಲ್ ಗಾಂಧಿ, ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಇದ್ದರು. ಸಭೆಯ ನಂತರ ಪಕ್ಷದ ಹಿರಿಯ ನಾಯಕರು ಮಾಧ್ಯಮಗೋಷ್ಠಿ ನಡೆಸಿ, ಸಮಿತಿಯ ನಿರ್ಧಾರಗಳನ್ನು ಪ್ರಕಟಿಸಿದರು.