ಒಡಿಶಾ ಉತ್ತರ ಭಾಗದ ಕರಾವಳಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪರಿಸ್ಥಿತಿಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವಂತೆ ಸೂಚಿಸಲಾಗಿದೆ. ಚಂಡಮಾರುತದಿಂದ ಹಾನಿ ಉಂಟಾದರೆ, ಆಶ್ರಯಕ್ಕಾಗಿ ಕಟ್ಟಡಗಳನ್ನು ಗುರುತಿಸುವಂತೆ ತಿಳಿಸಲಾಗಿದೆ. ಬಹುತೇಕ ಆಶ್ರಯ ಕಟ್ಟಡಗಳನ್ನು ಕೋವಿಡ್–19 ಕ್ವಾರಂಟೈನ್ ಕೇಂದ್ರಗಳಾಗಿ ಬಳಕೆ ಮಾಡಲಾಗುತ್ತಿದೆ.