ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮೀಪಿಸುತ್ತಿದೆ ಅಂಫಾನ್ ಚಂಡಮಾರುತ: ಪಶ್ಚಿಮ ಬಂಗಾಳದಲ್ಲಿ 3 ಲಕ್ಷ ಮಂದಿ ಸ್ಥಳಾಂತರ

Last Updated 20 ಮೇ 2020, 5:17 IST
ಅಕ್ಷರ ಗಾತ್ರ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಈಚಿನ ವರ್ಷಗಳಲ್ಲಿ ಅತ್ಯಂತ ಕೆಟ್ಟ ಚಂಡಮಾರುತ ಎಂದು ಹೇಳಲಾದಅಂಫಾನ್ ಚಂಡಮಾರುತವು ಪಶ್ಚಿಮ ಬಂಗಾಳ ಕರಾವಳಿಯನ್ನು ಸಮೀಪಿಸುತ್ತಿದೆ. ನಿನ್ನೆಯಷ್ಟೇ ಅಂಫಾನ್ ಚಂಡಮಾರುತದ ಸ್ಥಿತಿಯನ್ನು 'ಸೂಪರ್‌ ಚಂಡಮಾರುತ'ದಿಂದ 'ಅತಿ ಗಂಭೀರ ಚಂಡಮಾರುತ' ಸ್ಥಿತಿಗೆ ಹವಾಮಾನ ಇಲಾಖೆ ಇಳಿಸಿತ್ತು.

ಚಂಡಮಾರುತದ ಮೋಡಗಳಿಂದಾಗಿ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಭಾರಿ ಮಳೆ ಆರಂಭವಾಗಿದ್ದು, ಬಿರುಗಾಳಿ ಬೀಸುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಚಂಡಮಾರುತವು ತೀರಕ್ಕೆ ಅಪ್ಪಳಿಸಿದಾಗ ಭಾರೀ ಹಾನಿ ಸಂಭವಿಸಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಪಶ್ಚಿಮ ಬಂಗಾಳದ ದಿಘಾ ಮತ್ತು ಬಾಂಗ್ಲಾದೇಶದ ಹತಿಯಾ ನಡುವಣ ಪ್ರದೇಶದಲ್ಲಿಚಂಡಮಾರುತವು ತೀರವನ್ನು ಪ್ರವೇಶಿಸಲಿದೆ ಎಂದು ಅಂದಾಜಿಸಲಾಗಿದೆ. ಈ ವೇಳೆ ಗಂಟೆಗೆ 185 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಂಡಮಾರುತದ ಮಾಹಿತಿ ಸಂಗ್ರಹ ವೈಜ್ಞಾನಿಕವಾಗಿ ಆರಂಭವಾದ ನಂತರ ಹಿಂದೂ ಮಹಾಸಾಗರದ ಈಶಾನ್ಯ ಭಾಗದಲ್ಲಿರೂಪುಗೊಂಡ ಮೊದಲ'ಸೂಪರ್ ಸೈಕ್ಲೋನ್' ಇದು. ಬಂಗಾಳ ಕೊಲ್ಲಿಯಲ್ಲಿ ನೌಕಾಪಡೆಯು ಕಟ್ಟೆಚ್ಚರ ಸ್ಥಿತಿಯಲ್ಲಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.

ಕೋವಿಡ್‌ ಸೋಂಕು ವ್ಯಾಪಕವಾಗಿ ಇರುವ ಸಂದರ್ಭದಲ್ಲೇ ಚಂಡಮಾರುತ ಬಂದಿರುವುದು ಬಿಕ್ಕಟ್ಟಿಗೆ ಕಾರಣವಾಗಿದೆ. ಶಿಬಿರಗಳಲ್ಲಿ ಅಂತರ ಕಾಯ್ದುಕೊಳ್ಳುವಿಕೆಯನ್ನು ನಿರ್ವಹಿಸಲು ಎನ್‌ಡಿಆರ್‌ಎಫ್‌ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆ ಮಾಡಲಾಗಿದೆ. ಸುಮಾರು 10 ಲಕ್ಷ ಮಂದಿಯನ್ನು ಸ್ಥಳಾಂತರಿಸಲು ಒಡಿಶಾ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.

ಏನಿದು ಅಂಫಾನ್

ಅಂಫಾನ್ ಎಂಬ ಪದವು ಅಂ-ಪನ್ ಎಂಬ ಪದದಿಂದ ನಿಷ್ಪನ್ನಗೊಂಡಿದೆ. ಈ ಹೆಸರನ್ನು ಥಾಯ್ಲೆಂಡ್ 2004ರಲ್ಲಿ ನೀಡಿತು. ವಿಶಾಖಪಟ್ಟಣದಲ್ಲಿರುವ ಡಾಪ್ಲಾರ್ ಹವಾಮಾನ ರಾಡಾರ್ ಮೂಲಕ ಈ ಮಾರುತದ ಮೇಲೆನಿರಂತರ ನಿಗಾ ಇರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT