ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೋನಿ: ಮೃತರ ಸಂಖ್ಯೆ 43ಕ್ಕೆ ಏರಿಕೆ

ನೀರು, ವಿದ್ಯುತ್‌ಗೆ ಆಗ್ರಹಿಸಿ ಜನರಿಂದ ಪ್ರತಿಭಟನೆ
Last Updated 11 ಮೇ 2019, 18:26 IST
ಅಕ್ಷರ ಗಾತ್ರ

ಭುವನೇಶ್ವರ: ಫೋನಿ ಚಂಡಮಾರುತಕ್ಕೆ ನಲುಗಿರುವ ಒಡಿಶಾದಲ್ಲಿ ಕಟಕ್‌ ಮತ್ತು ಖುರ್ದಾ ಜಿಲ್ಲೆಯಲ್ಲಿ ಒಟ್ಟು ಇಬ್ಬರು ಮೃತಪಟ್ಟಿರುವುದು ವರದಿಯಾಗಿದೆ. ಆ ಮೂಲಕ ಮೃತರ ಸಂಖ್ಯೆ 43ಕ್ಕೆ ಏರಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಈ ನಡುವೆ, ರಾಜ್ಯದ ಕರಾವಳಿ ಭಾಗದ ಹಲವಾರು ಪಟ್ಟಣಗಳಲ್ಲಿ ಕುಡಿಯುವ ನೀರಿನ ಕೊರತೆ ಹಾಗೂ ವಿದ್ಯುತ್‌ ಸಂಪರ್ಕ ಇಲ್ಲದಿರುವುದನ್ನು ಖಂಡಿಸಿ ಜನರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದಾರೆ.

ಕೇಂದ್ರಪಾಡ, ಜಗತ್‌ಸಿಂಗ್‌ಪುರ, ಕಟಕ್‌ ಜಿಲ್ಲೆಗಳಲ್ಲಿ ಮೂಲಸೌಕರ್ಯಗಳನ್ನು ಒದಗಿಸುತ್ತಿಲ್ಲ ಎಂದು ದೂರಿ ಜನರು ಪ್ರತಿಭಟನೆ ಮುಂದುವರಿಸಿದ್ದಾರೆ. ರಾಜಧಾನಿ ಭುವನೇಶ್ವರದಲ್ಲಿ ಸಹ ಜನರು ಬೀದಿಗಿಳಿದಿದ್ದಾರೆ. ಸತತ ಎಂಟನೇ ದಿನವೂ ಸಮರ್ಪಕ ವಿದ್ಯುತ್‌ ಪೂರೈಕೆ ಇಲ್ಲದಿರುವುದನ್ನು ಖಂಡಿಸಿ ಆಕ್ರೋಶಗೊಂಡಿರುವ ಜನರು ಪ್ರತಿಭಟನೆ ಹಾದಿ ಹಿಡಿದಿದ್ದಾರೆ.

‘ಎನ್‌ಡಿಆರ್‌ಎಫ್‌ ನಿಯೋಜನೆ’: ಪರಿಹಾರ ಕಾರ್ಯವನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಸಹಕಾರಿಯಾಗುವಂತೆ 50 ಸ್ಥಳಗಳಲ್ಲಿ ಎನ್‌ಡಿಆರ್‌ಎಫ್‌ ತಂಡಗಳನ್ನು ನಿಯೋಜಿಸಲಾಗಿದೆ. ಪವರ್‌ ಕಟರ್, ಪ್ಲಾಸ್ಮಾ ಮತ್ತು ಗ್ಯಾಸ್‌ ಕಟರ್ ಸೇರಿದಂತೆ ಅತ್ಯಾಧುನಿಕ ಸಲಕರಣೆ, ಯಂತ್ರೋಪಕರಣಗಳನ್ನು ಒದಗಿಸಲಾಗಿದೆ’ ಎಂದು ಎನ್‌ಡಿಆರ್‌ಎಫ್‌ ನಿರ್ದೇಶಕ ಎಸ್‌.ಎನ್‌.ಪ್ರಧಾನ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT