ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಜಾ ಚಂಡಮಾರುತ: ಸಾವಿನ ಸಂಖ್ಯೆ 45ಕ್ಕೇರಿಕೆ

ಪರಿಹಾರ ಕಾರ್ಯಾಚರಣೆಗೆ ಕೈಜೋಡಿಸಲು ಸಿ.ಎಂ ಸೂಚನೆ
Last Updated 18 ನವೆಂಬರ್ 2018, 16:56 IST
ಅಕ್ಷರ ಗಾತ್ರ

ಸೇಲಂ: ತಮಿಳುನಾಡಿನಲ್ಲಿ ಅಪ್ಪಳಿಸಿದ ಗಾಜಾಚಂಡಮಾರುತದಿಂದ ಸಾವನ್ನಪ್ಪಿದವರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. ಪರಿಹಾರ ಕಾರ್ಯಾಚರಣೆಯಲ್ಲಿ ಎಲ್ಲ ಪಕ್ಷದ ಮುಖಂಡರು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರು ಮನವಿ ಮಾಡಿದ್ದಾರೆ.

ಸಂತ್ರಸ್ತರಿಗೆ ಸಮರೋಪಾದಿಯಲ್ಲಿ ನೆರವು ನೀಡಲಾಗುತ್ತಿದ್ದು, ಚಂಡಮಾರುತಪೀಡಿತ ನಾಗಪಟ್ಟಣಂ, ತಂಜಾವೂರ್‌, ತಿರುವರೂರ್‌ ಹಾಗೂ ಪುದುಕೊಟ್ಟಾಯಿ ಜಿಲ್ಲೆಗಳಿಗೆ ಸಚಿವರನ್ನೇ ಪರಿಹಾರ ಕಾರ್ಯದ ಮೇಲುಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.

‘ಚಂಡಮಾರುತದಿಂದ ತೀವ್ರವಾಗಿ ಹಾನಿಗೊಂಡಿರುವ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಸಾಕಷ್ಟು ಮರಗಳು ಧರೆಗುರುಳಿದ್ದು, ಬೆಳೆದು ನಿಂತ ಪೈರಿಗೆ ಹಾನಿಯಾಗಿದೆ. 45 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ತಿಳಿಸಿದರು.

₹10 ಲಕ್ಷ ಪರಿಹಾರ
ಮೃತರ ಕುಟುಂಬದಸದಸ್ಯರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹10 ಲಕ್ಷ ಪರಿಹಾರ ಘೋಷಿಸಿದ್ದು, ಗಂಭೀರವಾಗಿ ಗಾಯಗೊಂಡವರಿಗೆ ₹1 ಲಕ್ಷ, ಸಣ್ಣ ಪ್ರಮಾಣದ ಗಾಯಕ್ಕೆ ತುತ್ತಾದವರಿಗೆ ₹25ಸಾವಿರ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಘೋಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT