<p><strong>ನವದೆಹಲಿ:</strong> ‘ಬೆಂಗಳೂರಿನ ಬೆಳ್ಳಂದೂರು ಮತ್ತಿತರ ಪ್ರಮುಖ ಕೆರೆಗಳ ಪುನಶ್ಚೇತನ ಕಾರ್ಯವು ಸರ್ಕಾರದ ಇಚ್ಛಾಶಕ್ತಿಯ ಕೊರತೆಯಿಂದಾಗಿ ಸಾಕಾರಗೊಂಡಿಲ್ಲ’ ಎಂದು ಬೆಂಗಳೂರು ಗ್ರಾಮೀಣ ಕ್ಷೇತ್ರದ ಸಂಸದ, ಕಾಂಗ್ರೆಸ್ನ ಡಿ.ಕೆ. ಸುರೇಶ್ ದೂರಿದರು.<br /><br />ವಾಯು ಮಾಲಿನ್ಯ ಹಾಗೂ ಹವಾಮಾನ ಬದಲಾವಣೆ ವಿಷಯದ ಕುರಿತು ಲೋಕಸಭೆಯಲ್ಲಿ ಗುರುವಾರ ಸಂಜೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.<br /><br />ಬೆಂಗಳೂರಿನ ಮಲಿನಗೊಂಡಿರುವ ಕೆರೆಗಳ ಸಂರಕ್ಷಣೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ)ಯು ಅನೇಕ ಬಾರಿ ನೀಡಿರುವ ಆದೇಶಗಳ ಸಮರ್ಪಕ ಪಾಲನೆಯಾಗಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.<br /><br />ಎನ್ಜಿಟಿಯ ಆದೇಶಗಳ ಜಾರಿಯ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆವಹಿಸಿ, ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡುವ ಮೂಲಕ ಕೆರೆಗಳ ಕಾಯಕಲ್ಪಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.<br /><br />ಕನಕಪುರ ಬಳಿ 500 ಎಕರೆ ವ್ಯಾಪ್ತಿಯಲ್ಲಿರುವ ಬೈರಮಂಗಲ ಕೆರೆ ಕಲುಷಿತಗೊಂಡಿದೆ. ಅದರ ಪುನಶ್ಚೇತನಕ್ಕೂ ಕೇಂದ್ರ ವಿಶೇಷ ಆಸಕ್ತಿ ತಾಳಬೇಕು ಎಂದು ಅವರು ಕೋರಿದರು.<br /><br />ಕೃಷಿ ತ್ಯಾಜ್ಯಕ್ಕೆ ಬೆಂಕಿ ಇಡುತ್ತಿರುವ ರೈತರಿಂದ ಮಾತ್ರ ಪರಿಸರ ಮಲಿನಗೊಂಡಿದೆ ಎಂದು ದೂಷಿಸದೆ, ಪರಿಸರದ ಮೇಲೆ ದೌರ್ಜನ್ಯ ಎಸಗುತ್ತಿರುವ ಕೈಗಾರಿಕೆಗಳು ಮತ್ತು ಬಂಡವಾಳ ಶಾಹಿಗಳನ್ನು ನಿಯಂತ್ರಿಸಲು ಸೂಕ್ತ ಕಾನೂನು ರೂಪಿಸಬೇಕು ಎಂದು ಅವರು ಕನ್ನಡದಲ್ಲೇ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಬೆಂಗಳೂರಿನ ಬೆಳ್ಳಂದೂರು ಮತ್ತಿತರ ಪ್ರಮುಖ ಕೆರೆಗಳ ಪುನಶ್ಚೇತನ ಕಾರ್ಯವು ಸರ್ಕಾರದ ಇಚ್ಛಾಶಕ್ತಿಯ ಕೊರತೆಯಿಂದಾಗಿ ಸಾಕಾರಗೊಂಡಿಲ್ಲ’ ಎಂದು ಬೆಂಗಳೂರು ಗ್ರಾಮೀಣ ಕ್ಷೇತ್ರದ ಸಂಸದ, ಕಾಂಗ್ರೆಸ್ನ ಡಿ.ಕೆ. ಸುರೇಶ್ ದೂರಿದರು.<br /><br />ವಾಯು ಮಾಲಿನ್ಯ ಹಾಗೂ ಹವಾಮಾನ ಬದಲಾವಣೆ ವಿಷಯದ ಕುರಿತು ಲೋಕಸಭೆಯಲ್ಲಿ ಗುರುವಾರ ಸಂಜೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.<br /><br />ಬೆಂಗಳೂರಿನ ಮಲಿನಗೊಂಡಿರುವ ಕೆರೆಗಳ ಸಂರಕ್ಷಣೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ)ಯು ಅನೇಕ ಬಾರಿ ನೀಡಿರುವ ಆದೇಶಗಳ ಸಮರ್ಪಕ ಪಾಲನೆಯಾಗಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.<br /><br />ಎನ್ಜಿಟಿಯ ಆದೇಶಗಳ ಜಾರಿಯ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆವಹಿಸಿ, ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡುವ ಮೂಲಕ ಕೆರೆಗಳ ಕಾಯಕಲ್ಪಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.<br /><br />ಕನಕಪುರ ಬಳಿ 500 ಎಕರೆ ವ್ಯಾಪ್ತಿಯಲ್ಲಿರುವ ಬೈರಮಂಗಲ ಕೆರೆ ಕಲುಷಿತಗೊಂಡಿದೆ. ಅದರ ಪುನಶ್ಚೇತನಕ್ಕೂ ಕೇಂದ್ರ ವಿಶೇಷ ಆಸಕ್ತಿ ತಾಳಬೇಕು ಎಂದು ಅವರು ಕೋರಿದರು.<br /><br />ಕೃಷಿ ತ್ಯಾಜ್ಯಕ್ಕೆ ಬೆಂಕಿ ಇಡುತ್ತಿರುವ ರೈತರಿಂದ ಮಾತ್ರ ಪರಿಸರ ಮಲಿನಗೊಂಡಿದೆ ಎಂದು ದೂಷಿಸದೆ, ಪರಿಸರದ ಮೇಲೆ ದೌರ್ಜನ್ಯ ಎಸಗುತ್ತಿರುವ ಕೈಗಾರಿಕೆಗಳು ಮತ್ತು ಬಂಡವಾಳ ಶಾಹಿಗಳನ್ನು ನಿಯಂತ್ರಿಸಲು ಸೂಕ್ತ ಕಾನೂನು ರೂಪಿಸಬೇಕು ಎಂದು ಅವರು ಕನ್ನಡದಲ್ಲೇ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>