<p><strong>ಮುಂಬೈ: </strong>ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ ಪಾನ್ಸರೆ ಹತ್ಯೆಯ ತನಿಖೆಯನ್ನು ಸ್ವತಂತ್ರವಾಗಿ ಕೈಗೊಳ್ಳಬೇಕು ಎಂದು ಬಾಂಬೆ ಹೈಕೋರ್ಟ್ ಸಿಬಿಐ ಮತ್ತು ಮತ್ತು ಮಹಾರಾಷ್ಟ್ರದ ಸಿಐಡಿಗೆ ತಿಳಿಸಿದೆ.</p>.<p>ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಸಂದರ್ಭದಲ್ಲಿ ದೊರೆತ ಮಾಹಿತಿಗಳ ಮೇಲೆಯೇ ಸಂಪೂರ್ಣ ಅವಲಂಬನೆಯಾಗದೆ ಈ ಪ್ರಕರಣಗಳ ತನಿಖೆ ಕೈಗೊಳ್ಳಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.</p>.<p>ನ್ಯಾಯಮೂರ್ತಿ ಎಸ್.ಸಿ. ಧರ್ಮಾಧಿಕಾರಿ ಮತ್ತು ಎಂ.ಎಸ್. ಕಾರ್ಣಿಕ್ ಅವರನ್ನು ಒಳಗೊಂಡ ಪೀಠವು ಈ ನಿರ್ದೇಶನ ನೀಡಿದ್ದು, ದಾಭೋಲ್ಕರ್ ಮತ್ತು ಪಾನ್ಸರೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿಗಳ ಕುರಿತು ಮಾಹಿತಿ ಸಂಗ್ರಹಿಸಿ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದೆ.</p>.<p>ಸಿಐಡಿಯ ವಿಶೇಷ ತನಿಖಾ ತಂಡ ಈ ಇಬ್ಬರ ಹತ್ಯೆ ಕುರಿತ ತನಿಖೆಯ ಪ್ರಗತಿ ಕುರಿತು ವರದಿ ಸಲ್ಲಿಸಿದಾಗ ಪೀಠವು ಈ ನಿರ್ದೇಶನಗಳನ್ನು ನೀಡಿದೆ.</p>.<p>ಪಾನ್ಸರೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ಆರೋಪಿಗಳ ಕುರಿತು ಮಾಹಿತಿ ಸಂಗ್ರಹಿಸಲು ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ ಎಂದು ತನಿಖಾ ತಂಡ ಪೀಠಕ್ಕೆ ಮಾಹಿತಿ ನೀಡಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಈ ಮೊದಲಿನ ವಿಚಾರಣೆ ಸಂದರ್ಭದಲ್ಲಿಯೂ ಇದೇ ರೀತಿಯ ಮಾಹಿತಿ ನೀಡಲಾಗಿತ್ತು. ಹೀಗಾಗಿ, ಇನ್ನೊಂದು ಪ್ರಕರಣದ ಮೇಲೆ ಅವಲಂಬನೆಯಾಗಬೇಡಿ ಎಂದು ತಿಳಿಸಿತು.</p>.<p>**</p>.<p><strong>ಕರ್ನಾಟಕದಲ್ಲಿ ತ್ವರಿತ ತನಿಖೆ</strong></p>.<p>‘ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ತ್ವರಿತಗತಿಯಲ್ಲಿ ತನಿಖೆ ನಡೆಯುತ್ತಿದೆ. ರಾಜ್ಯ ಸರ್ಕಾರದಿಂದ ಎಲ್ಲ ರೀತಿಯ ನೆರವು ಸಹ ದೊರೆಯುತ್ತಿದೆ’ ಎಂದು ನ್ಯಾಯಾಲಯ ಹೇಳಿದೆ.</p>.<p>‘ಆದರೆ, ಮಹಾರಾಷ್ಟ್ರದಲ್ಲಿನ ತನಿಖೆ ಸಂಸ್ಥೆಗಳು ನಿಧಾನಗತಿಯಲ್ಲಿವೆ. ಸರ್ಕಾರದಿಂದ ಸಹಕಾರ ದೊರೆಯುತ್ತಿಲ್ಲ ಮತ್ತು ಸಮನ್ವಯದ ಕೊರತೆಯೂ ಇದೆ’ ಎಂದು ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ ಪಾನ್ಸರೆ ಹತ್ಯೆಯ ತನಿಖೆಯನ್ನು ಸ್ವತಂತ್ರವಾಗಿ ಕೈಗೊಳ್ಳಬೇಕು ಎಂದು ಬಾಂಬೆ ಹೈಕೋರ್ಟ್ ಸಿಬಿಐ ಮತ್ತು ಮತ್ತು ಮಹಾರಾಷ್ಟ್ರದ ಸಿಐಡಿಗೆ ತಿಳಿಸಿದೆ.</p>.<p>ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಸಂದರ್ಭದಲ್ಲಿ ದೊರೆತ ಮಾಹಿತಿಗಳ ಮೇಲೆಯೇ ಸಂಪೂರ್ಣ ಅವಲಂಬನೆಯಾಗದೆ ಈ ಪ್ರಕರಣಗಳ ತನಿಖೆ ಕೈಗೊಳ್ಳಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.</p>.<p>ನ್ಯಾಯಮೂರ್ತಿ ಎಸ್.ಸಿ. ಧರ್ಮಾಧಿಕಾರಿ ಮತ್ತು ಎಂ.ಎಸ್. ಕಾರ್ಣಿಕ್ ಅವರನ್ನು ಒಳಗೊಂಡ ಪೀಠವು ಈ ನಿರ್ದೇಶನ ನೀಡಿದ್ದು, ದಾಭೋಲ್ಕರ್ ಮತ್ತು ಪಾನ್ಸರೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿಗಳ ಕುರಿತು ಮಾಹಿತಿ ಸಂಗ್ರಹಿಸಿ ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದೆ.</p>.<p>ಸಿಐಡಿಯ ವಿಶೇಷ ತನಿಖಾ ತಂಡ ಈ ಇಬ್ಬರ ಹತ್ಯೆ ಕುರಿತ ತನಿಖೆಯ ಪ್ರಗತಿ ಕುರಿತು ವರದಿ ಸಲ್ಲಿಸಿದಾಗ ಪೀಠವು ಈ ನಿರ್ದೇಶನಗಳನ್ನು ನೀಡಿದೆ.</p>.<p>ಪಾನ್ಸರೆ ಪ್ರಕರಣದಲ್ಲಿ ನಾಪತ್ತೆಯಾಗಿರುವ ಆರೋಪಿಗಳ ಕುರಿತು ಮಾಹಿತಿ ಸಂಗ್ರಹಿಸಲು ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ ಎಂದು ತನಿಖಾ ತಂಡ ಪೀಠಕ್ಕೆ ಮಾಹಿತಿ ನೀಡಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಈ ಮೊದಲಿನ ವಿಚಾರಣೆ ಸಂದರ್ಭದಲ್ಲಿಯೂ ಇದೇ ರೀತಿಯ ಮಾಹಿತಿ ನೀಡಲಾಗಿತ್ತು. ಹೀಗಾಗಿ, ಇನ್ನೊಂದು ಪ್ರಕರಣದ ಮೇಲೆ ಅವಲಂಬನೆಯಾಗಬೇಡಿ ಎಂದು ತಿಳಿಸಿತು.</p>.<p>**</p>.<p><strong>ಕರ್ನಾಟಕದಲ್ಲಿ ತ್ವರಿತ ತನಿಖೆ</strong></p>.<p>‘ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ತ್ವರಿತಗತಿಯಲ್ಲಿ ತನಿಖೆ ನಡೆಯುತ್ತಿದೆ. ರಾಜ್ಯ ಸರ್ಕಾರದಿಂದ ಎಲ್ಲ ರೀತಿಯ ನೆರವು ಸಹ ದೊರೆಯುತ್ತಿದೆ’ ಎಂದು ನ್ಯಾಯಾಲಯ ಹೇಳಿದೆ.</p>.<p>‘ಆದರೆ, ಮಹಾರಾಷ್ಟ್ರದಲ್ಲಿನ ತನಿಖೆ ಸಂಸ್ಥೆಗಳು ನಿಧಾನಗತಿಯಲ್ಲಿವೆ. ಸರ್ಕಾರದಿಂದ ಸಹಕಾರ ದೊರೆಯುತ್ತಿಲ್ಲ ಮತ್ತು ಸಮನ್ವಯದ ಕೊರತೆಯೂ ಇದೆ’ ಎಂದು ಅಭಿಪ್ರಾಯಪಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>