ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಲಿಗೆ ಪ್ರಕರಣ: ದಾವೂದ್‌ ತಮ್ಮನ ಮಗನ ಬಂಧನ

Last Updated 18 ಜುಲೈ 2019, 16:55 IST
ಅಕ್ಷರ ಗಾತ್ರ

ಮುಂಬೈ: ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಸೋದರನ ಮಗನನ್ನು ಸುಲಿಗೆ ಪ್ರಕರಣದಲ್ಲಿ ಮುಂಬೈ ಪೊಲೀಸರು ಬಂಧಿಸಿರುವುದಾಗಿ ಅಧಿಕಾರಿಗಳು ಗುರುವಾರ ಹೇಳಿದ್ದಾರೆ.

ದಾವೂದ್‌ ಸಹೋದರ ಇಕ್ಬಾಲ್‌ ಕಸ್ಕರ್‌ ಮಗ ರಿಜ್ವಾನ್‌ ಕಸ್ಕರ್‌ನನ್ನು ಮುಂಬೈನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂಧಿಸಲಾಗಿದೆ. ದೇಶಬಿಟ್ಟು ಹೋಗಲು ಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಕ್ಬಾಲ್‌ ಕಸ್ಕರ್‌ನನ್ನು ಸುಲಿಗೆ ಪ್ರಕರಣದಲ್ಲಿ ಈಗಾಗಲೇ ಬಂಧಿಸಲಾಗಿದ್ದು, ಠಾಣೆ ಜೈಲಿನಲ್ಲಿರಿಸಲಾಗಿದೆ.

ದಾವೂದ್‌ ಇಬ್ರಾಹಿಂ ಗ್ಯಾಂಗ್‌ನ ಫಾಹಿಂ ಮಚ್‌ಮಚ್‌ನ ಆಪ್ತ ಅಹಮದ್‌ ರಿಜಾ ವಧಾರಿಯಾನನ್ನು ಎರಡು ದಿನಗಳ ಹಿಂದೆ ಮುಂಬೈ ಪೊಲೀಸರ ವಿಶೇಷ ಘಟಕ ಬಂಧಿಸಿತ್ತು.

ರಿಜ್ವಾನ್‌ನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT