ರಾಜ್ಯದಲ್ಲಿ ₹65,000 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ‘ಯೋಗಿ ಅವರಿಗೆ ಒಂದು ನಗರಸಭೆಯನ್ನು ಮುನ್ನಡೆಸಿದ ಅನುಭವವೂ ಇಲ್ಲ. ಹೀಗಿರುವಾಗ ಇಷ್ಟು ದೊಡ್ಡ ರಾಜ್ಯದ ಜವಾಬ್ದಾರಿಯನ್ನು ಅವರಿಗೆ ನೀಡುವುದು ಎಷ್ಟು ಸರಿ ಎಂದು ಅನೇಕರು ನಮ್ಮನ್ನು ಪ್ರಶ್ನಿಸಿದ್ದರು. ಕಳೆದ ಒಂದು ವರ್ಷದಲ್ಲಿ ಉತ್ತರಪ್ರದೇಶದಲ್ಲಿ ಹೂಡಿಕೆಯ ಪ್ರಮಾಣ ಹೆಚ್ಚಾಗಿದೆ. ಈ ರಾಜ್ಯವು ನನ್ನಲ್ಲಿ ಅಚ್ಚರಿ ಮೂಡಿಸಿದೆ. ಆದಿತ್ಯನಾಥ ಅವರನ್ನು ಮುಖ್ಯಮಂತ್ರಿಯಾಗಿಸಿದ ನಮ್ಮ ನಿರ್ಧಾರ ಸರಿಯಾಗಿದೆ ಎಂದು ಈಗ ನಾವು ಧೈರ್ಯವಾಗಿ ಹೇಳಬಹುದಾಗಿದೆ’ ಎಂದರು.