ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಶಿ ತರೂರ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

Last Updated 3 ನವೆಂಬರ್ 2018, 10:56 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ ಮುಖಂಡ ಶಶಿ ತರೂರ್‌ ವಿರುದ್ಧ ದೆಹಲಿಯ ಬಿಜೆಪಿ ಮುಖಂಡ ರಾಜೀವ್‌ ಬಬ್ಬರ್‌ ಎಂಬವರು ಇಲ್ಲಿನ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ ಈಚೆಗೆ ನಡೆದ ಸಾಹಿತ್ಯೋತ್ಸವದಲ್ಲಿ ತರೂರ್‌ ಅವರು, ‘ಆರ್‌ಎಸ್‌ಎಸ್‌ ಮುಖಂಡರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿವಲಿಂಗದ ಮೇಲೆ ಕುಳಿತಿರುವ ಚೇಳಿಗೆ ಹೋಲಿಸಿದ್ದರು’ ಎಂದು ಹೇಳಿದ್ದರು. ಈ ಹೇಳಿಕೆಯ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.

‘ನಾನೊಬ್ಬ ಶಿವ ಭಕ್ತ. ತರೂರ್‌ ಅವರು ಇಂತಹ ಹೇಳಿಕೆ ನೀಡುವ ಮೂಲಕ ಕೋಟಿಗಟ್ಟಲೆ ಶಿವಭಕ್ತರ ಧಾರ್ಮಿಕ ಭಾವನೆಗಳನ್ನು ಕಡೆಗಣಿಸಿದ್ದಾರೆ ಮತ್ತು ಗಾಸಿಗೊಳಿಸಿದ್ದಾರೆ’ ಎಂದು ರಾಜೀವ್‌ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT