ನವದೆಹಲಿ: ದೆಹಲಿಗೆ ಪೂರ್ಣ ಪ್ರಮಾಣದ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಮಾರ್ಚ್ 1ರಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮುಂದೂಡಿರುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಭಾರತ–ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಕಾರಣ ಈ ತೀರ್ಮಾನ ತೆಗೆದುಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ದೇಶದಲ್ಲಿ ಆತ್ಮಾಹುತಿ ದಾಳಿ ನಡೆಸಲು ಸಂಚು ರೂಪಿಸಿದ್ದ ಜೈಷ್ –ಎ–ಮೊಹಮದ್ (ಜೆಇಎಂ) ಉಗ್ರರ ಶಿಬಿರಗಳ ಮೇಲೆ ಯೋಧರು ಮಂಗಳವಾರ ಬೆಳಗಿನ ಜಾವ ದಾಳಿ ನಡೆಸಿದ್ದು, ಉಪವಾಸ ಸತ್ಯಾಗ್ರಹ ನಡೆಸಲು ಇದು ಸರಿಯಾದ ಸಮಯ ಅಲ್ಲ ಎಂದು ಅವರು ಹೇಳಿದ್ದಾರೆ.