<p><strong>ನವದೆಹಲಿ: </strong>ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನವದೆಹಲಿ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ನಾಮಪತ್ರ ಸಲ್ಲಿಸಲು ಮಂಗಳವಾರ ಸುಮಾರು ಆರು ಗಂಟೆಗಳ ಕಾಲ ಕಾಯಬೇಕಾಯಿತು.</p>.<p>ಸೋಮವಾರ ನಡೆದ ರೋಡ್ ಷೋ ವಿಳಂಬವಾಗಿದ್ದರಿಂದ ನಾಮಪತ್ರ ಸಲ್ಲಿಸುವುದು ಕೇಜ್ರಿವಾಲ್ಗೆ ಸಾಧ್ಯವಾಗಿರಲಿಲ್ಲ. ಆದರೆ, ಮಂಗಳವಾರ ಚುನಾವಣಾಧಿಕಾರಿ ಕಚೇರಿಗೆ ಬಂದಾಗ ಅಚ್ಚರಿ ಕಾದಿತ್ತು. ಹಲವರು ಸರದಿಯಲ್ಲಿದ್ದರು. ಕೇಜ್ರಿವಾಲ್ 45ನೇಯವರಾಗಿದ್ದರು. ಹೀಗಾಗಿ, ಸಂಜೆ 6.30ರ ಸುಮಾರಿಗೆ ನಾಮಪತ್ರ ಸಲ್ಲಿಸಿದರು.</p>.<p>ಮಧ್ಯಾಹ್ನ ಈ ಬಗ್ಗೆ ಟ್ವೀಟ್ ಮಾಡಿದ ಕೇಜ್ರಿವಾಲ್, ‘ನಾಮಪತ್ರ ಸಲ್ಲಿಸಲು ಕಾಯುತ್ತಿದ್ದೇನೆ. ನನ್ನ ಟೋಕನ್ ಸಂಖ್ಯೆ 45. ಇಲ್ಲಿ ನಾಮಪತ್ರ ಸಲ್ಲಿಸಲು ಹಲವರು ಬಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹಲವು ಮಂದಿ ಪಾಲ್ಗೊಳ್ಳುತ್ತಿರುವುದನ್ನು ನೋಡಿ ಸಂತೋಷವಾಗಿದೆ’ ಎಂದಿದ್ದರು.</p>.<p><strong>ಯುವ ಮೋರ್ಚಾ ಅಧ್ಯಕ್ಷ ಕಣಕ್ಕೆ: </strong>ವೃತ್ತಿಯಲ್ಲಿ ವಕೀಲರಾದ ಯುವ ಮೋರ್ಚಾ ಅಧ್ಯಕ್ಷ ಸುನಿಲ್ ಯಾದವ್ ಅವರನ್ನು ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಣಕ್ಕಿಳಿಸಿದೆ. ಕಾಂಗ್ರೆಸ್ನಿಂದ ರೊಮೇಶ್ ಸಭರ್ವಾಲ್ ನಾಮಪತ್ರ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನವದೆಹಲಿ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ನಾಮಪತ್ರ ಸಲ್ಲಿಸಲು ಮಂಗಳವಾರ ಸುಮಾರು ಆರು ಗಂಟೆಗಳ ಕಾಲ ಕಾಯಬೇಕಾಯಿತು.</p>.<p>ಸೋಮವಾರ ನಡೆದ ರೋಡ್ ಷೋ ವಿಳಂಬವಾಗಿದ್ದರಿಂದ ನಾಮಪತ್ರ ಸಲ್ಲಿಸುವುದು ಕೇಜ್ರಿವಾಲ್ಗೆ ಸಾಧ್ಯವಾಗಿರಲಿಲ್ಲ. ಆದರೆ, ಮಂಗಳವಾರ ಚುನಾವಣಾಧಿಕಾರಿ ಕಚೇರಿಗೆ ಬಂದಾಗ ಅಚ್ಚರಿ ಕಾದಿತ್ತು. ಹಲವರು ಸರದಿಯಲ್ಲಿದ್ದರು. ಕೇಜ್ರಿವಾಲ್ 45ನೇಯವರಾಗಿದ್ದರು. ಹೀಗಾಗಿ, ಸಂಜೆ 6.30ರ ಸುಮಾರಿಗೆ ನಾಮಪತ್ರ ಸಲ್ಲಿಸಿದರು.</p>.<p>ಮಧ್ಯಾಹ್ನ ಈ ಬಗ್ಗೆ ಟ್ವೀಟ್ ಮಾಡಿದ ಕೇಜ್ರಿವಾಲ್, ‘ನಾಮಪತ್ರ ಸಲ್ಲಿಸಲು ಕಾಯುತ್ತಿದ್ದೇನೆ. ನನ್ನ ಟೋಕನ್ ಸಂಖ್ಯೆ 45. ಇಲ್ಲಿ ನಾಮಪತ್ರ ಸಲ್ಲಿಸಲು ಹಲವರು ಬಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹಲವು ಮಂದಿ ಪಾಲ್ಗೊಳ್ಳುತ್ತಿರುವುದನ್ನು ನೋಡಿ ಸಂತೋಷವಾಗಿದೆ’ ಎಂದಿದ್ದರು.</p>.<p><strong>ಯುವ ಮೋರ್ಚಾ ಅಧ್ಯಕ್ಷ ಕಣಕ್ಕೆ: </strong>ವೃತ್ತಿಯಲ್ಲಿ ವಕೀಲರಾದ ಯುವ ಮೋರ್ಚಾ ಅಧ್ಯಕ್ಷ ಸುನಿಲ್ ಯಾದವ್ ಅವರನ್ನು ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಣಕ್ಕಿಳಿಸಿದೆ. ಕಾಂಗ್ರೆಸ್ನಿಂದ ರೊಮೇಶ್ ಸಭರ್ವಾಲ್ ನಾಮಪತ್ರ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>