ಶೀಲಾ ಹಾಗೂ ಚಾಕೋ ಅವರು ಶುಕ್ರವಾರವಷ್ಟೇ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು. ಮುಂಬರುವ ವಿಧಾನಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸುವಂತೆ ಅವರು ಸಲಹೆ ನೀಡಿದ್ದರು. ಲೋಕಸಭೆ ಚುನಾವಣೆ ಸೋಲಿನ ಕುರಿತು ಸಲ್ಲಿಕೆಯಾಗಿದ್ದ ವರದಿಯನ್ನು ಪರಿಗಣಿಸಿ ಶೀಲಾ ಈ ಕ್ರಮಕ್ಕೆ ಮುಂದಾಗಿದ್ದರು. ಈ ಕ್ರಮವನ್ನು ಕಾಂಗ್ರೆಸ್ನ ಕೆಲವು ಮುಖಂಡರು ಆಕ್ಷೇಪಿಸಿ, ದೂರು ಸಲ್ಲಿಸಿದ್ದರು.