ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಶಾಹೀನ್ ಬಾಗ್ನಲ್ಲಿ ನಡೆದ ಪ್ರತಿಭಟನೆಗಳನ್ನೇ ಅಸ್ತ್ರ ಮಾಡಿಕೊಂಡ ಶಾ ಪಡೆ, ಮತಗಳ ದ್ರುವೀಕರಣಕ್ಕೆ ಕೈಹಾಕಿದರೆ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ವಲಯಗಳಲ್ಲಿ ತನ್ನ ನೇತೃತ್ವದ ಸರ್ಕಾರ ಮಾಡಿದ ಸಾಧನೆಗಳನ್ನೇ ಎಎಪಿ ಚುನಾವಣಾ ವಿಷಯ ಮಾಡಿಕೊಂಡಿತ್ತು. ‘ವಿಧಾನಸಭಾ ಚುನಾವಣೆಯಲ್ಲಿ ನಮಗೆ ಮುಖ್ಯವಾಗಿರುವುದು ಸ್ಥಳೀಯ ವಿಷಯಗಳೇ ಹೊರತು ರಾಷ್ಟ್ರೀಯ ವಿದ್ಯಮಾನಗಳಲ್ಲ’ ಎನ್ನುವುದು ಮತದಾರರು ಬರೆದ ತೀರ್ಪಿನ ಒಟ್ಟು ಸಾರ.