<p><strong>ನವದೆಹಲಿ: </strong>‘ದೆಹಲಿ ಮುಖ್ಯಮಂತ್ರಿಯಾಗಲು ಬಿಜೆಪಿಯಲ್ಲಿ ಅರ್ಹರಾದವರು ಯಾರೂ ಇಲ್ಲ’ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.</p>.<p>ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾದಗುರುವಾರ ಮಾತನಾಡಿದ ಅವರು, ‘ಮತ್ತೆ ಆಡಳಿತಕ್ಕೆ ಬಂದರೆ ಉಚಿತ ಯೋಜನೆಗಳನ್ನು ಮುಂದುವರಿಸಲಾಗುವುದು ಮತ್ತು ಅಗತ್ಯ ಬಿದ್ದರೆ ಇಂತಹ ಇನ್ನಷ್ಟು ಯೋಜನೆಗಳನ್ನು ಪರಿಚಯಿಸುತ್ತೇವೆ’ ಎಂದೂಭರವಸೆ ನೀಡಿದ್ದಾರೆ.</p>.<p>ಬಿಜೆಪಿಯಲ್ಲಿ ಒಳ್ಳೆಯ ಅಭ್ಯರ್ಥಿಗಳ ಕೊರತೆ ಇದೆ. ಒಂದು ವೇಳೆ ಸಂಬಿತ್ ಪಾತ್ರ ಅಥವಾ ಅನುರಾಗ್ ಠಾಕೂರ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದರೆ ಏನಾಗಬಹದು? ಎಂದೂ ಪ್ರಶ್ನಿಸಿದ್ದಾರೆ.</p>.<p>ಚುನಾವಣೆಗಿಂತ ಮೊದಲು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವಂತೆ ಅವರು ಬಿಜೆಪಿಗೆ ಸವಾಲು ಹಾಕಿದ್ದಾರೆ.</p>.<p><strong>ಪ್ರತಿಕ್ರಿಯೆ ಕೇಳಿದ ಹೈಕೋರ್ಟ್</strong></p>.<p>ದೆಹಲಿ ಚುನಾವಣೆಗೆಕರೋಲ್ ಬಾಗ್ ಕ್ಷೇತ್ರದಿಂದ ಸ್ಪರ್ಧಿಸಿರುವ ಎಎಪಿ ಅಭ್ಯರ್ಥಿ ವಿಶೇಷ್ ರವಿ ಅವರು ಅಫಿಡವಿಟ್ನಲ್ಲಿ ಶೈಕ್ಷಣಿಕ ಅರ್ಹತೆಯನ್ನು ಮರೆಮಾಚಿದ್ದು, ಅವರ ಉಮೇದುವಾರಿಕೆಯನ್ನು ತಿರಸ್ಕರಿಸಬೇಕೆಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ದೆಹಲಿ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ಗುರುವಾರ ಸೂಚಿಸಿದೆ.</p>.<p>ಯೋಗಿಂದರ್ ಚಾಂಡೋಲಿಯಾ ಎಂಬುವವರು ಸಲ್ಲಿಸಿರುವ ಅರ್ಜಿಯ ಕುರಿತು, ನಿಲುವು ವ್ಯಕ್ತಪಡಿಸುವಂತೆ ಚುನಾವಣಾ ಆಯೋಗಕ್ಕೆ ಮತ್ತು ಅಭ್ಯರ್ಥಿಗೆ ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಸಿ. ಹರಿಶಂಕರ್ ಅವರನ್ನೊಳಗೊಂಡ ನ್ಯಾಯಪೀಠವು ನೋಟಿಸ್ ನೀಡಿದೆ.</p>.<p>ಈ ಕುರಿತು ನ್ಯಾಯಪೀಠವು ಶುಕ್ರವಾರ ವಿಚಾರಣೆ ನಡೆಸಲಿದೆ. ಬಿಜೆಪಿಯು ಕರೋಲ್ ಬಾಗ್ ಕ್ಷೇತ್ರದಲ್ಲಿ ಗೆಲ್ಲುವ ಭರವಸೆ ಹೊಂದಿದೆ.</p>.<p><strong>ಅರ್ಜಿ ವಿಚಾರಣೆಗೆ ನಿರಾಕರಣೆ</strong></p>.<p>ನಾಮಪತ್ರ ತಿರಸ್ಕೃತಗೊಂಡಿರುವುದನ್ನು ಪ್ರಶ್ನಿಸಿ 11 ಮಂದಿ ಸ್ವತಂತ್ರ ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ದೆಹಲಿ ಮುಖ್ಯಮಂತ್ರಿಯಾಗಲು ಬಿಜೆಪಿಯಲ್ಲಿ ಅರ್ಹರಾದವರು ಯಾರೂ ಇಲ್ಲ’ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.</p>.<p>ಬಹಿರಂಗ ಪ್ರಚಾರಕ್ಕೆ ಅಂತಿಮ ದಿನವಾದಗುರುವಾರ ಮಾತನಾಡಿದ ಅವರು, ‘ಮತ್ತೆ ಆಡಳಿತಕ್ಕೆ ಬಂದರೆ ಉಚಿತ ಯೋಜನೆಗಳನ್ನು ಮುಂದುವರಿಸಲಾಗುವುದು ಮತ್ತು ಅಗತ್ಯ ಬಿದ್ದರೆ ಇಂತಹ ಇನ್ನಷ್ಟು ಯೋಜನೆಗಳನ್ನು ಪರಿಚಯಿಸುತ್ತೇವೆ’ ಎಂದೂಭರವಸೆ ನೀಡಿದ್ದಾರೆ.</p>.<p>ಬಿಜೆಪಿಯಲ್ಲಿ ಒಳ್ಳೆಯ ಅಭ್ಯರ್ಥಿಗಳ ಕೊರತೆ ಇದೆ. ಒಂದು ವೇಳೆ ಸಂಬಿತ್ ಪಾತ್ರ ಅಥವಾ ಅನುರಾಗ್ ಠಾಕೂರ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದರೆ ಏನಾಗಬಹದು? ಎಂದೂ ಪ್ರಶ್ನಿಸಿದ್ದಾರೆ.</p>.<p>ಚುನಾವಣೆಗಿಂತ ಮೊದಲು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವಂತೆ ಅವರು ಬಿಜೆಪಿಗೆ ಸವಾಲು ಹಾಕಿದ್ದಾರೆ.</p>.<p><strong>ಪ್ರತಿಕ್ರಿಯೆ ಕೇಳಿದ ಹೈಕೋರ್ಟ್</strong></p>.<p>ದೆಹಲಿ ಚುನಾವಣೆಗೆಕರೋಲ್ ಬಾಗ್ ಕ್ಷೇತ್ರದಿಂದ ಸ್ಪರ್ಧಿಸಿರುವ ಎಎಪಿ ಅಭ್ಯರ್ಥಿ ವಿಶೇಷ್ ರವಿ ಅವರು ಅಫಿಡವಿಟ್ನಲ್ಲಿ ಶೈಕ್ಷಣಿಕ ಅರ್ಹತೆಯನ್ನು ಮರೆಮಾಚಿದ್ದು, ಅವರ ಉಮೇದುವಾರಿಕೆಯನ್ನು ತಿರಸ್ಕರಿಸಬೇಕೆಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ದೆಹಲಿ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ಗುರುವಾರ ಸೂಚಿಸಿದೆ.</p>.<p>ಯೋಗಿಂದರ್ ಚಾಂಡೋಲಿಯಾ ಎಂಬುವವರು ಸಲ್ಲಿಸಿರುವ ಅರ್ಜಿಯ ಕುರಿತು, ನಿಲುವು ವ್ಯಕ್ತಪಡಿಸುವಂತೆ ಚುನಾವಣಾ ಆಯೋಗಕ್ಕೆ ಮತ್ತು ಅಭ್ಯರ್ಥಿಗೆ ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಸಿ. ಹರಿಶಂಕರ್ ಅವರನ್ನೊಳಗೊಂಡ ನ್ಯಾಯಪೀಠವು ನೋಟಿಸ್ ನೀಡಿದೆ.</p>.<p>ಈ ಕುರಿತು ನ್ಯಾಯಪೀಠವು ಶುಕ್ರವಾರ ವಿಚಾರಣೆ ನಡೆಸಲಿದೆ. ಬಿಜೆಪಿಯು ಕರೋಲ್ ಬಾಗ್ ಕ್ಷೇತ್ರದಲ್ಲಿ ಗೆಲ್ಲುವ ಭರವಸೆ ಹೊಂದಿದೆ.</p>.<p><strong>ಅರ್ಜಿ ವಿಚಾರಣೆಗೆ ನಿರಾಕರಣೆ</strong></p>.<p>ನಾಮಪತ್ರ ತಿರಸ್ಕೃತಗೊಂಡಿರುವುದನ್ನು ಪ್ರಶ್ನಿಸಿ 11 ಮಂದಿ ಸ್ವತಂತ್ರ ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>