2015ರ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ್ದ ಅಫಿಡವಿಟ್ನಲ್ಲಿ ನಕಲಿ ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಿದ್ದ ಆರೋಪತೋಮರ್ ಮೇಲಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ತೋಮರ್ ಗೆಲುವನ್ನು ಅಸಿಂಧುಗೊಳಿಸಿ ಶುಕ್ರವಾರ ತೀರ್ಪು ಪ್ರಕಟಿಸಿತ್ತು. ಇದರ ಬೆನ್ನಲ್ಲೇ, ತೋಮರ್ ಸ್ಪರ್ಧಿಸುವುದನ್ನು ಬಿಜೆಪಿಯು ಚುನಾವಣಾ ಆಯೋಗದ ಬಳಿಪ್ರಶ್ನಿಸಿತ್ತು. ಅಲ್ಲದೆ, ಎಎಪಿ ಕಳಂಕಿತರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುತ್ತಿದೆ ಎಂದು ಆರೋಪಿಸಿತ್ತು.