ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಿರ್ಭಯಾ ಅಪರಾಧಿ ಸುಪ್ರೀಂಗೆ

ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಮುಕೇಶ್ ಕುಮಾರ್ ಸಿಂಗ್
Last Updated 25 ಜನವರಿ 2020, 9:17 IST
ಅಕ್ಷರ ಗಾತ್ರ

ನವದೆಹಲಿ:ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿಯೊಬ್ಬ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾನೆ.

ಅಪರಾಧಿ ಮುಕೇಶ್ ಕುಮಾರ್ ಸಿಂಗ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ ಎಂದು ಆತನ ಪರ ವಕೀಲ ವೃಂದಾ ಗ್ರೋವರ್ ತಿಳಿಸಿದ್ದಾರೆ.

ಅಪರಾಧಿಗಳಾದ ಮುಕೇಶ್ ಕುಮಾರ್ ಸಿಂಗ್ ಮತ್ತುವಿನಯ್ ಕುಮಾರ್ ಶರ್ಮಾ ಸಲ್ಲಿಸಿದ್ದ ಪರಿಹಾರಾತ್ಮಕ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ತಿರಸ್ಕರಿಸಿತ್ತು. ಬಳಿಕ ಇಬ್ಬರೂ ಕ್ಷಮಾದಾನ ಅರ್ಜಿ ಸಲ್ಲಿಸಿದ್ದು, ಅದೂ ತಿರಸ್ಕೃತಗೊಂಡಿತ್ತು. ಈ ಮಧ್ಯೆ,ಪ್ರಕರಣದಇನ್ನಿಬ್ಬರುಅಪರಾಧಿಗಳಾದ ಅಕ್ಷಯ್ ಕುಮಾರ್ ಸಿಂಗ್ ಮತ್ತು ಪವನ್ ಸಿಂಗ್‌ ಪರ ಪರಿಹಾರಾತ್ಮಕ ಅರ್ಜಿ ಸಲ್ಲಿಸಲು ಬೇಕಿರುವ ದಾಖಲೆಗಳನ್ನು ತಿಹಾರ್ ಜೈಲು ಅಧಿಕಾರಿಗಳು ಇನ್ನೂ ನೀಡಿಲ್ಲ ಎಂದು ವಕೀಲ ಎ.ಪಿ.ಸಿಂಗ್ ಶುಕ್ರವಾರ ಆರೋಪಿಸಿದ್ದರು. ಈ ಬಗ್ಗೆಪಟಿಯಾಲಹೌಸ್ ಕೋರ್ಟ್‌ಗೆ ಅರ್ಜಿಯನ್ನೂ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT