ನಾಲ್ವರು ಅಪರಾಧಿಗಳ ಪೈಕಿ ವಿನಯ ಶರ್ಮಾ (26) ಮತ್ತು ಮುಕೇಶ್ ಕುಮಾರ್ (32) ಸಲ್ಲಿಸಿದ್ದ ಅರ್ಜಿಯನ್ನು, ನ್ಯಾಯಮೂರ್ತಿ ಎನ್.ವಿ.ರಮಣ ಅವರ ನೇತೃತ್ವದ ಐವರು ನ್ಯಾಯಮೂರ್ತಿಗಳ ನ್ಯಾಯಪೀಠವು ತಿರಸ್ಕರಿಸಿತು. ಅರ್ಜಿ ಪರಿಗಣಿಸಲು ಯಾವುದೇ ಅರ್ಹತೆ ಇಲ್ಲ ಎಂದು ಹೇಳಿತು. ಹೀಗಾಗಿ ಗಲ್ಲು ಶಿಕ್ಷೆ ಬಹುತೇಕ ಖಾತ್ರಿಯಾಗಿದೆ.