ಯೋಜನೆ ಬಗ್ಗೆ ವಿಸ್ತೃತ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಒಂದು ವಾರ ಕಾಲಾವಕಾಶ ನೀಡಲಾಗಿದೆ. ಬಳಿಕಸಚಿವ ಸಂಪುಟದಲ್ಲಿ ಪ್ರಸ್ತಾಪ ಮಂಡನೆ ಮಾಡಲಾಗುವುದು ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. ಈ ಯೋಜನೆಯಿಂದ ಮೆಟ್ರೊದಲ್ಲಿ ಪ್ರಯಾಣಿಕ ದಟ್ಟಣೆ ಉಂಟಾಗದು. ಪ್ರತಿದಿನ ಪ್ರಯಾಣಿಸುವವರ ಸಂಖ್ಯೆ ಕೇವಲ 1 ಲಕ್ಷದಷ್ಟು ಹೆಚ್ಚಾಗಬಹುದು. ಸದ್ಯ ದೆಹಲಿ ಮೆಟ್ರೊದಲ್ಲಿ ಪ್ರತಿ ದಿನ 25 ಲಕ್ಷ ಜನ ಪ್ರಯಾಣಿಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.