ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುಗ್ರಾಮ–ದೆಹಲಿ ನಡುವಿನ ರಸ್ತೆ ಬಂದ್:  ನಾಗರಿಕರ ಪ್ರತಿಭಟನೆ

Last Updated 29 ಮೇ 2020, 7:30 IST
ಅಕ್ಷರ ಗಾತ್ರ

ನವದೆಹಲಿ: ಗುರುಗ್ರಾಮ ಮತ್ತು ದೆಹಲಿ ನಡುವಿನ ರಸ್ತೆಯನ್ನು ಬಂದ್ಹರಿಯಾಣ ಸರ್ಕಾರ ನಿನ್ನೆ ರಾತ್ರಿ ಬಂದ್ ಮಾಡಿದ್ದರಿಂದ ಗಡಿ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್ ಉಂಟಾಗಿತ್ತು.

ಇದರಿಂದ ಗೊಂದಲಕ್ಕೆ ಒಳಗಾದ ವಾಹನ ಸವಾರರುಪ್ರತಿಭಟನೆ ನಡೆಸಿದರು. ಗಡಿಯಲ್ಲಿಬಹುತೇಕ ವಲಸೆ ಹಾಗೂ ಕೂಲಿ ಕಾರ್ಮಿಕರು ಇದ್ದರು. ಸೈಕಲ್‌ಗಳು ಹಾಗೂ ದ್ವಿಚಕ್ರ ವಾಹನಗಳು, ಕಾರುಗಳು, ಲಘು ವಾಣಿಜ್ಯ ವಾಹನಗಳ ಮೂಲಕ ತಮ್ಮ ಸ್ವಂತ ಊರುಗಳಿಗೆ ತೆರಳಲು ಮುಂದಾಗಿದ್ದರು.

ಈ ವೇಳೆ ಕೂಲಿ ಕಾರ್ಮಿಕರು, ವಲಸೆ ಕಾರ್ಮಿಕರನ್ನು ಮಾತ್ರ ತಪಾಸಣೆ ನಡೆಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇತರೆ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿದೆ ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ.

ಹರಿಯಾಣದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಹರಿಯಾಣ ಸರ್ಕಾರ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡಲು ನಿರ್ಧರಿಸಿದೆ. ಇದರ ಮೊದಲ ಭಾಗವಾಗಿ ಗುರುಗ್ರಾಮ ಮತ್ತು ದೆಹಲಿ ನಡುವಿನ ರಸ್ತೆಯನ್ನು ಬಂದ್ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT