ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅಗ್ನಿ ಅವಘಡ: ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

Last Updated 10 ಡಿಸೆಂಬರ್ 2019, 13:48 IST
ಅಕ್ಷರ ಗಾತ್ರ

ನವದೆಹಲಿ : ಇಲ್ಲಿನ ಅನಾಜ್‌ ಮಂಡಿ ಪ್ರದೇಶದಲ್ಲಿ ಸಂಭವಿಸಿದ್ದಅಗ್ನಿ ಅವಘಡದ ಕುರಿತು ನ್ಯಾಯಾಂಗ ತನಿಖೆ ಅಥವಾ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್‌) ದೆಹಲಿ ಹೈಕೋರ್ಟ್‌ ತಿರಸ್ಕರಿಸಿದೆ.

‘ಡಿಸೆಂಬರ್‌ 8ರಂದು ಈ ಅವಘಡ ನಡೆದಿದ್ದು, ಈ ವಿಚಾರದಲ್ಲಿ ನ್ಯಾಯಾಲಯವು ಇಷ್ಟು ಬೇಗ ಮಧ್ಯಪ್ರವೇಶಿಸುವುದು ಸರಿಯಲ್ಲ. ಸಂಬಂಧಿಸಿದ ಇಲಾಖೆಗಳು ಈಗಾಗಲೇ ತನಿಖೆ ಆರಂಭಿಸಿದ್ದು, ಭವಿಷ್ಯದಲ್ಲಿ ಇಂಥ ಘಟನೆ ಮರುಕಳಿಸದಂತೆಯೂ ಕ್ರಮ ಕೈಗೊಳ್ಳುತ್ತಿವೆ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎನ್‌.ಪಟೇಲ್‌ ಹಾಗೂ ನ್ಯಾಯಮೂರ್ತಿ ಸಿ.ಹರಿ ಶಂಕರ್‌ ಅವರಿದ್ದ ಪೀಠ ತಿಳಿಸಿತು.

‘ಮುಂದಿನ ದಿನಗಳಲ್ಲಿ ಅವಘಡಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಹೋದಲ್ಲಿ, ಆ ವೇಳೆ ಮತ್ತೊಮ್ಮೆ ಮನವಿ ಸಲ್ಲಿಸಿ’ ಎಂದು ಅರ್ಜಿದಾರರಾದ ಅವಧ್‌ ಕೌಶಿಕ್‌ ಅವರಿಗೆ ಪೀಠ ಸಲಹೆ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT