ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್–19 ಪ್ರಸರಣ ನಿಯಂತ್ರಿಸುವ ಸಂಬಂಧ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರು ಉನ್ನತ ಮಟ್ಟದ ಸಮಿತಿಯೊಂದನ್ನು ಶುಕ್ರವಾರ ರಚಿಸಿದ್ದಾರೆ.
ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ನ (ಐಸಿಎಂಆರ್) ಮಹಾ ನಿರ್ದೇಶಕ ಬಲರಾಂ ಭಾರ್ಗವ್ ನೇತೃತ್ವದ ಈ ಸಮಿತಿ, ಕೋವಿಡ್–19 ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ದೆಹಲಿ ಸರ್ಕಾರಕ್ಕೆ ಸಲಹೆ–ಸೂಚನೆ ನೀಡಲಿದೆ.
ಎಐಐಎಂಎಸ್ ನಿರ್ದೇಶಕ ರಣದೀಫ್ ಗುಲೇರಿಯಾ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಇಬ್ಬರು ಸದಸ್ಯರು ಸೇರಿದಂತೆ 6 ಜನರು ಈ ಸಮಿತಿ ಸದಸ್ಯರಾಗಿದ್ದಾರೆ.