<p><strong>ನವದೆಹಲಿ:</strong>ಥಾಯ್ಲೆಂಡ್ ಹಾಗೂ ಮಲೇಷ್ಯಾಗೆ ಭೇಟಿ ನೀಡಿ ಮರಳಿದ್ದ ದೆಹಲಿ ಮೂಲದ ವ್ಯಕ್ತಿಯೊಬ್ಬರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿಸೋಂಕು ಪೀಡಿತರ ಸಂಖ್ಯೆ 31ಕ್ಕೆ ಏರಿದೆ.</p>.<p>‘ದೆಹಲಿ ಮೂಲದ 25 ವರ್ಷದ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಆರೋಗ್ಯಸ್ಥಿತಿ ಸ್ಥಿರವಾಗಿದೆ. ನಿಗಾ ಇರಿಸಲಾಗಿದೆ’ ಎಂದುಆರೋಗ್ಯ ಇಲಾಖೆ ಅಧಿಕಾರಿ ತಿಳಿಸಿದರು.</p>.<p>‘ಇವರ ಕುಟುಂಬದ ಏಳು ಸದಸ್ಯರ ಆರೋಗ್ಯದ ಮೇಲೂ ನಿಗಾ ಇರಿಸಲಾಗಿದ್ದು, ಪ್ರತ್ಯೇಕವಾಗಿ ಇರಿಸಲಾಗಿದೆ. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.</p>.<p>ಸೋಂಕು ವ್ಯಾಪಿಸುವುದನ್ನು ತಡೆಯಲು ಮುಂಜಾಗ್ರತೆಯಾಗಿ ವಿವಿಧ ಕ್ರಮಗಳನ್ನು ಕೈಗೊಂಡಿದ್ದು, ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಸಾರ್ವಜನಿಕರಿಗೆ ಕಟ್ಟೆಚ್ಚರ ನೀಡಲಾಗಿದೆ.</p>.<p>ಮುಂಜಾಗ್ರತೆಯಾಗಿ ಶಾಲೆಗಳಲ್ಲಿ ಬೆಳಗಿನ ಸಾಮೂಹಿಕ ಪ್ರಾರ್ಥನೆ ನಡೆಸಬಾರದು ಮತ್ತು ಶಾಲೆಗಳಲ್ಲಿ ಹಾಜರಾತಿ ದಾಖಲಾತಿಗೆ ಬಯೊಮೆಟ್ರಿಕ್ ಪದ್ಧತಿ ಕೈಬಿಡಲು ದೆಹಲಿ ಸರ್ಕಾರ ನಿರ್ದೇಶಿಸಿದೆ.</p>.<p>ಮಾರ್ಚ್ ಅಂತ್ಯದವರೆಗೆ ಕೇಂದ್ರ ಸರ್ಕಾರದ ಎಲ್ಲ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಿ ಸಿಬ್ಬಂದಿ ಮತ್ತು ಆಡಳಿತ ತರಬೇತಿ ಸಚಿವಾಲಯ ಸುತ್ತೋಲೆ ಹೊರಡಿಸಿದೆ.ಸಂಸತ್ ಆವರಣದಲ್ಲಿ ಸಭೆ, ಸಮಾರಂಭಗಳನ್ನು ನಡೆಸದಂತೆ ಸೂಚಿಸಿದೆ.</p>.<p><strong>‘ತಾಜ್ ಮಹಲ್’ಗೂ ವೀಕ್ಷಣೆಗೂ ನಿರ್ಬಂಧ?</strong><br />ಪ್ರತಿನಿತ್ಯ 25 ಸಾವಿರಕ್ಕೂ ಅಧಿಕ ಪ್ರವಾಸಿಗರನ್ನು ಸೆಳೆಯುವ ತಾಜ್ ಮಹಲ್ ವೀಕ್ಷಣೆಗೆ ತಾತ್ಕಾಲಿಕವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರುವ ಸಾಧ್ಯತೆ ಇದೆ.</p>.<p>ಸೋಂಕು ಭೀತಿ ಹಿನ್ನೆಲೆಯಲ್ಲಿ ತಾಜ್ ಮಹಲ್ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲು ಆಗ್ರಹಿಸಿಆಗ್ರಾದ ಮೇಯರ್ ನವೀನ್ ಜೈನ್ ಕೇಂದ್ರದ ಪ್ರವಾಸೋದ್ಯಮ ಸಚಿವರಿಗೆಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಥಾಯ್ಲೆಂಡ್ ಹಾಗೂ ಮಲೇಷ್ಯಾಗೆ ಭೇಟಿ ನೀಡಿ ಮರಳಿದ್ದ ದೆಹಲಿ ಮೂಲದ ವ್ಯಕ್ತಿಯೊಬ್ಬರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿಸೋಂಕು ಪೀಡಿತರ ಸಂಖ್ಯೆ 31ಕ್ಕೆ ಏರಿದೆ.</p>.<p>‘ದೆಹಲಿ ಮೂಲದ 25 ವರ್ಷದ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಆರೋಗ್ಯಸ್ಥಿತಿ ಸ್ಥಿರವಾಗಿದೆ. ನಿಗಾ ಇರಿಸಲಾಗಿದೆ’ ಎಂದುಆರೋಗ್ಯ ಇಲಾಖೆ ಅಧಿಕಾರಿ ತಿಳಿಸಿದರು.</p>.<p>‘ಇವರ ಕುಟುಂಬದ ಏಳು ಸದಸ್ಯರ ಆರೋಗ್ಯದ ಮೇಲೂ ನಿಗಾ ಇರಿಸಲಾಗಿದ್ದು, ಪ್ರತ್ಯೇಕವಾಗಿ ಇರಿಸಲಾಗಿದೆ. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.</p>.<p>ಸೋಂಕು ವ್ಯಾಪಿಸುವುದನ್ನು ತಡೆಯಲು ಮುಂಜಾಗ್ರತೆಯಾಗಿ ವಿವಿಧ ಕ್ರಮಗಳನ್ನು ಕೈಗೊಂಡಿದ್ದು, ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಸಾರ್ವಜನಿಕರಿಗೆ ಕಟ್ಟೆಚ್ಚರ ನೀಡಲಾಗಿದೆ.</p>.<p>ಮುಂಜಾಗ್ರತೆಯಾಗಿ ಶಾಲೆಗಳಲ್ಲಿ ಬೆಳಗಿನ ಸಾಮೂಹಿಕ ಪ್ರಾರ್ಥನೆ ನಡೆಸಬಾರದು ಮತ್ತು ಶಾಲೆಗಳಲ್ಲಿ ಹಾಜರಾತಿ ದಾಖಲಾತಿಗೆ ಬಯೊಮೆಟ್ರಿಕ್ ಪದ್ಧತಿ ಕೈಬಿಡಲು ದೆಹಲಿ ಸರ್ಕಾರ ನಿರ್ದೇಶಿಸಿದೆ.</p>.<p>ಮಾರ್ಚ್ ಅಂತ್ಯದವರೆಗೆ ಕೇಂದ್ರ ಸರ್ಕಾರದ ಎಲ್ಲ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಿ ಸಿಬ್ಬಂದಿ ಮತ್ತು ಆಡಳಿತ ತರಬೇತಿ ಸಚಿವಾಲಯ ಸುತ್ತೋಲೆ ಹೊರಡಿಸಿದೆ.ಸಂಸತ್ ಆವರಣದಲ್ಲಿ ಸಭೆ, ಸಮಾರಂಭಗಳನ್ನು ನಡೆಸದಂತೆ ಸೂಚಿಸಿದೆ.</p>.<p><strong>‘ತಾಜ್ ಮಹಲ್’ಗೂ ವೀಕ್ಷಣೆಗೂ ನಿರ್ಬಂಧ?</strong><br />ಪ್ರತಿನಿತ್ಯ 25 ಸಾವಿರಕ್ಕೂ ಅಧಿಕ ಪ್ರವಾಸಿಗರನ್ನು ಸೆಳೆಯುವ ತಾಜ್ ಮಹಲ್ ವೀಕ್ಷಣೆಗೆ ತಾತ್ಕಾಲಿಕವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರುವ ಸಾಧ್ಯತೆ ಇದೆ.</p>.<p>ಸೋಂಕು ಭೀತಿ ಹಿನ್ನೆಲೆಯಲ್ಲಿ ತಾಜ್ ಮಹಲ್ ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲು ಆಗ್ರಹಿಸಿಆಗ್ರಾದ ಮೇಯರ್ ನವೀನ್ ಜೈನ್ ಕೇಂದ್ರದ ಪ್ರವಾಸೋದ್ಯಮ ಸಚಿವರಿಗೆಪತ್ರ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>