<p><strong>ನವದೆಹಲಿ:</strong> ದೆಹಲಿಯಿಂದ ಮಾಸ್ಕೊಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅರ್ಧ ಹಾದಿ ತಲುಪಿ ಹಿಂದಿರುಗಿರುವ ಘಟನೆ ಶನಿವಾರ ನಡೆದಿದೆ.</p>.<p>ವಿಮಾನದ ಪೈಲಟ್ ಒಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವುದನ್ನು ವಿಮಾನಯಾನ ಸಂಸ್ಥೆಯ ಸಿಬ್ಬಂದಿ ಖಚಿತ ಪಡಿಸಿಕೊಂಡ ಬೆನ್ನಲ್ಲೇ ವಿಮಾನ ವಾಪಸ್ ಕರೆಸಿಕೊಳ್ಳಲಾಗಿದೆ.</p>.<p>'ಲಾಕ್ಡೌನ್ನಿಂದಾಗಿ ಮಾಸ್ಕೊದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಏರ್ ಇಂಡಿಯಾದ ಎ320 ವಿಮಾನ ದೆಹಲಿಯಿಂದ ಹೊರಟಿದೆ. ಕೇಂದ್ರ ಸರ್ಕಾರದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಭಾರತೀಯರನ್ನು ಕರೆತರಲು ಖಾಲಿ ವಿಮಾನ ತೆರಳಿತ್ತು. ಅನಂತರದಲ್ಲಿ ಪೈಲಟ್ ಒಬ್ಬರಿಗೆ ಕೋವಿಡ್–19 ದೃಢಪಟ್ಟಿರುವುದನ್ನು ನಿಲ್ದಾಣದಲ್ಲಿದ್ದ ವಿಮಾನಯಾನ ಸಂಸ್ಥೆಯ ಸಿಬ್ಬಂದಿ ಗಮನಿಸಿದ್ದಾರೆ. ಅದಾಗಲೇ ಉಜ್ಬೆಕಿಸ್ತಾನ್ ವಾಯು ವಲಯ ತಲುಪಿದ್ದ ವಿಮಾನವನ್ನು ವಾಪಸ್ ಕರೆಸಿಕೊಳ್ಳಲಾಗಿದೆ' ಎಂದು ಏರ್ ಇಂಡಿಯಾದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ವಿಮಾನ ಶನಿವಾರ ಮಧ್ಯಾಹ್ನ 12:30ಕ್ಕೆ ದೆಹಲಿಗೆ ಮರಳಿದೆ.ವಿಮಾನ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.</p>.<p>ಅಧಿಕಾರಿಗಳ ಪ್ರಕಾರ, ಸಿಲುಕಿರುವ ಭಾರತೀಯರನ್ನು ಕರೆತರಲು ಮತ್ತೊಂದು ವಿಮಾನವನ್ನು ಮಾಸ್ಕೊಗೆ ಕಳುಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯಿಂದ ಮಾಸ್ಕೊಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅರ್ಧ ಹಾದಿ ತಲುಪಿ ಹಿಂದಿರುಗಿರುವ ಘಟನೆ ಶನಿವಾರ ನಡೆದಿದೆ.</p>.<p>ವಿಮಾನದ ಪೈಲಟ್ ಒಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವುದನ್ನು ವಿಮಾನಯಾನ ಸಂಸ್ಥೆಯ ಸಿಬ್ಬಂದಿ ಖಚಿತ ಪಡಿಸಿಕೊಂಡ ಬೆನ್ನಲ್ಲೇ ವಿಮಾನ ವಾಪಸ್ ಕರೆಸಿಕೊಳ್ಳಲಾಗಿದೆ.</p>.<p>'ಲಾಕ್ಡೌನ್ನಿಂದಾಗಿ ಮಾಸ್ಕೊದಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಏರ್ ಇಂಡಿಯಾದ ಎ320 ವಿಮಾನ ದೆಹಲಿಯಿಂದ ಹೊರಟಿದೆ. ಕೇಂದ್ರ ಸರ್ಕಾರದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಭಾರತೀಯರನ್ನು ಕರೆತರಲು ಖಾಲಿ ವಿಮಾನ ತೆರಳಿತ್ತು. ಅನಂತರದಲ್ಲಿ ಪೈಲಟ್ ಒಬ್ಬರಿಗೆ ಕೋವಿಡ್–19 ದೃಢಪಟ್ಟಿರುವುದನ್ನು ನಿಲ್ದಾಣದಲ್ಲಿದ್ದ ವಿಮಾನಯಾನ ಸಂಸ್ಥೆಯ ಸಿಬ್ಬಂದಿ ಗಮನಿಸಿದ್ದಾರೆ. ಅದಾಗಲೇ ಉಜ್ಬೆಕಿಸ್ತಾನ್ ವಾಯು ವಲಯ ತಲುಪಿದ್ದ ವಿಮಾನವನ್ನು ವಾಪಸ್ ಕರೆಸಿಕೊಳ್ಳಲಾಗಿದೆ' ಎಂದು ಏರ್ ಇಂಡಿಯಾದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ವಿಮಾನ ಶನಿವಾರ ಮಧ್ಯಾಹ್ನ 12:30ಕ್ಕೆ ದೆಹಲಿಗೆ ಮರಳಿದೆ.ವಿಮಾನ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.</p>.<p>ಅಧಿಕಾರಿಗಳ ಪ್ರಕಾರ, ಸಿಲುಕಿರುವ ಭಾರತೀಯರನ್ನು ಕರೆತರಲು ಮತ್ತೊಂದು ವಿಮಾನವನ್ನು ಮಾಸ್ಕೊಗೆ ಕಳುಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>