ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜರಂಗದಳದವರಿಂದಲೇ ಕೊಲೆ: ಸಂಬಂಧಿಗಳ ಆರೋಪ

Last Updated 30 ಮೇ 2018, 19:30 IST
ಅಕ್ಷರ ಗಾತ್ರ

ಉಡುಪಿ: ತಾಲ್ಲೂಕಿನ ಪೆರ್ಡೂರು ಬಳಿ ಬುಧವಾರ ವ್ಯಕ್ತಿಯೊಬ್ಬರು ಸಂಶಯಾಸ್ಪದವಾಗಿ ಮೃತಪಟ್ಟಿದ್ದು, ಬಜರಂಗದಳ ದವರೇ ಅವರ ಸಾವಿಗೆ ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಮೃತರನ್ನು ಮಂಗಳೂರಿನ ಜೋಕಟ್ಟೆ ನಿವಾಸಿ ಹಸನಬ್ಬ (62) ಎಂದು ಗುರುತಿಸಲಾಗಿದೆ. ಹಸುಗಳನ್ನು ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ ಬಜರಂಗದಳದವರು ಹಸನಬ್ಬ ಅವರನ್ನು ಕೊಲೆ ಮಾಡಿದ್ದಾರೆ ಎಂದು ಮೃತರ ಸಂಬಂಧಿಗಳು
ದೂರಿದ್ದಾರೆ.

ಹಸನಬ್ಬ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸಿ, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಎಸ್‌ಪಿ ಲಕ್ಷ್ಮಣ ನಿಂಬರಗಿ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.‌

ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಬುಧವಾರ ಬೆಳಿಗ್ಗೆ 4ರ ಸುಮಾರಿಗೆ ಪೆರ್ಡೂರು ಸಮೀಪ ಹಸುಗಳನ್ನು ಕಳವು ಮಾಡಿ ಸಾಗಿಸಲಾ ಗುತ್ತಿದೆ ಎಂಬ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ವಾಹನವನ್ನು ಬಿಟ್ಟು ಪರಾರಿಯಾದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ವಾಹನ ಹಾಗೂ 10 ಎಳೆಯ ಹಸುಗಳನ್ನು ವಶಕ್ಕೆ ಪಡೆಯಲಾಗಿತ್ತು’ ಎಂದರು.

ಇದಾದ ಬಳಿಕ, ಬೆಳಿಗ್ಗೆ 11 ಗಂಟೆಗೆ ಸಮೀಪದ ತೋಟದಲ್ಲಿ ವ್ಯಕ್ತಿಯ ಶವ ಪತ್ತೆಯಾದ ಮಾಹಿತಿ ದೊರೆಯಿತು. ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಮೃತರು ಹಸನಬ್ಬ ಎಂಬುದು ತಿಳಿಯಿತು. ಅವರ ಕುಟುಂಬದವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಯುತ್ತಿದೆ ಎಂದು ಎಸ್‌ಪಿ
ಸ್ಪಷ್ಟಪಡಿಸಿದರು.

ಶವ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಆರೋಪಿಗಳು ಯಾರೇ ಆದರೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಸ್‌ಪಿ ತಿಳಿಸಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT