ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಹಿಂಸಾಚಾರ: ಆರೋಪಿ ಇಶ್ರತ್ ಜಹಾನ್‌ಗೆ ಮದುವೆಗಾಗಿ ಜಾಮೀನು

Last Updated 30 ಮೇ 2020, 21:40 IST
ಅಕ್ಷರ ಗಾತ್ರ

ನವದೆಹಲಿ:ಪುರಸಭೆಯ ಮಾಜಿ ಕೌನ್ಸಿಲರ್, ಕಾಂಗ್ರೆಸ್‌ನ ಇಶ್ರತ್ ಜಹಾನ್ ಅವರಿಗೆ ವಿವಾಹವಾಗಲು ದೆಹಲಿ ನ್ಯಾಯಾಲಯವು ಶನಿವಾರ 10 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಿದೆ.

ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಹಿಂಸಾಚಾರ ಪ್ರಕರಣದಲ್ಲಿ ಇಶ್ರತ್ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹೆಚ್ಚುವರಿ ಸೆಷೆನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು,ಜೂನ್ 10ರಿಂದ 19ರ ತನಕ ಒಟ್ಟು 10 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಿದ್ದು,ಯಾವುದೇ ಸಾಕ್ಷ್ಯಾಧಾರಗಳನ್ನು ಹಾಳು ಮಾಡಬಾರದು, ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಬಾರದು’ ಎಂದು ನಿರ್ದೇಶನ ನೀಡಿದ್ದಾರೆ.

ಇಶ್ರತ್ ಪರವಕೀಲರಾದ ಎಸ್‌.ಕೆ. ಶರ್ಮಾ ಮತ್ತು ಲಲಿತ್ ವಲೀಚಾ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT