ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 42ಕ್ಕೆ ಏರಿಕೆ

Last Updated 28 ಫೆಬ್ರುವರಿ 2020, 10:21 IST
ಅಕ್ಷರ ಗಾತ್ರ

ನವದೆಹಲಿ: ಗಲಭೆ ಪೀಡಿತ ದೆಹಲಿಯಲ್ಲಿ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.

ಕಳೆದ ಭಾನುವಾರ ಸಂಜೆಯಿಂದ ಗುರುವಾರದವರೆಗೆ ಹೊತ್ತಿ ಉರಿದಿರುವ ಈಶಾನ್ಯ ದೆಹಲಿಯಲ್ಲಿ ಶುಕ್ರವಾರ ಪರಿಸ್ಥಿತಿ ನಿಯಂತ್ರಣದಲ್ಲಿದೆ.

ಈಶಾನ್ಯ ದೆಹಲಿಯ ಚಾಂದ್‌ಬಾಗ್‌, ಶಿವಪುರಿ, ಮೌಜ್‌ಪುರ, ಜಾಫರಾಬಾದ್‌, ಭಜನ್‌ಪುರ್‌, ಗೋಕುಲ್‌ಪುರಿ, ಭಾಗೀರಥಿ ವಿಹಾರ್‌, ಬಾಬರ್‌ಪುರ, ಸೀಲಂಪುರ್‌, ಖಜೂರಿಖಾಸ್‌, ಶಿವ್‌ವಿಹಾರ್‌, ಮುಸ್ತಫಾಬಾದ್‌ ಮತ್ತಿತರ ಪ್ರದೇಶಗಳಲ್ಲಿ ಈಗಲೂ ಬೂದಿ ಮೆಚ್ಚಿದ ಕೆಂಡದಂತಹ ಸ್ಥಿತಿ ಇದೆ.

ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವೆ ನಡೆದಸಂಘರ್ಷದಲ್ಲಿ ಇವರೆಗೂ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಗೆ ಆಗ್ರಹ
ದೆಹಲಿ ಗಲಭೆ ಕುರಿತು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ನೇತೃತ್ವದಲ್ಲಿ ಮೇಲ್ವಾಚರಣೆ ನಡೆಸುವಂತೆ ಆಗ್ರಹಿಸಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರಿಗೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಪತ್ರ ಬರೆದಿದ್ದಾರೆ.

‘ಪರಿಸ್ಥಿತಿ ಶಾಂತಿಯುತ’
ದೆಹಲಿಯ ಜಾಫರಾಬಾದ್‌ ಪ್ರದೇಶಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸದ್ಯದ ಪರಿಸ್ಥಿತಿ ಶಾಂತಿಯುತವಾಗಿದೆ. ಆದರೆ, ಉದ್ವಿಗ್ನತೆ ಇನ್ನು ಹಾಗೆಯೇ ಉಳಿದಿದೆ’ ಎಂದು ತಿಳಿಸಿದ್ದಾರೆ.

ಅತ್ಯಾಚಾರ ಅಥವಾ ಕಿರುಕುಳದಂತಹ ಯಾವುದೇ ಪ್ರಕರಣಗಳು ದಾಖಲಾಗಿಲ್ಲಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT