ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಟು ರದ್ದತಿಯಿಂದಾಗಿ ಕಪ್ಪು ಹಣದ ಮೇಲೆ ಕಡಿವಾಣ ಬಿದ್ದಿಲ್ಲ: ಒ.ಪಿ. ರಾವತ್

Last Updated 3 ಡಿಸೆಂಬರ್ 2018, 4:53 IST
ಅಕ್ಷರ ಗಾತ್ರ

ನವದೆಹಲಿ: ನೋಟು ರದ್ಧತಿ ಕಪ್ಪು ಹಣದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಒ.ಪಿ ರಾವತ್ ಹೇಳಿದ್ದಾರೆ.ಶನಿವಾರ ಹುದ್ದೆಯಿಂದ ನಿವೃತ್ತಿ ಹೊಂದಿರುವರಾವತ್ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಈ ಮಾತುಗಳನ್ನಾಡಿದ್ದಾರೆ.

ನೋಟು ರದ್ದತಿ ನಂತರ ನಡೆದ ಚುನಾವಣೆಯ ವೇಳೆಅತೀ ಹೆಚ್ಚು ಕಪ್ಪುಹಣವನ್ನು ನಾವು ವಶಪಡಿಸಿಕೊಂಡಿದ್ದೆವು. ಹಾಗಾಗಿ ನೋಟು ರದ್ದತಿಯಿಂದಾಗಿ ಕಪ್ಪು ಹಣದ ನಿಯಂತ್ರಣ ಸಾಧ್ಯವಾಗಿಲ್ಲ ಎಂಬುದು ಇಲ್ಲಿ ಸ್ಪಷ್ಟವಾಗಿದೆ.ಐದು ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ವೇಳೆ ಕಪ್ಪು ಹಣವನ್ನು ಚುನಾವಣಾ ಆಯೋಗ ವಶ ಪಡಿಸಿಕೊಂಡಿದೆ. ಇಲ್ಲಿಯವರೆಗೆ ₹200 ಕೋಟಿಗಿಂತಲೂ ಹೆಚ್ಚು ಕಪ್ಪು ಹಣ ವಶಪಡಿಸಲಾಗಿದೆ ಎಂದು ರಾವತ್ ಹೇಳಿದ್ದಾರೆ.

ಅಂತರ್ಜಾಲದೊಂದಿಗೆ ಸಂಪರ್ಕ ಹೊಂದಿರುವ ವೋಟಿಂಗ್ ಮಷೀನ್ ಗಳನ್ನು ಯಾವುದೇ ರೀತಿಯಲ್ಲಿ ಹ್ಯಾಕ್ ಮಾಡಲಾಗುವುದಿಲ್ಲ. ಶೇ.99ರಷ್ಟು ರಾಜಕೀಯ ಪಕ್ಷಗಳು ಇವಿಎಂನ್ನು ಬೆಂಬಲಿಸುತ್ತಿವೆ.ಇದನ್ನು ಪರಿಶೀಲಿಸಬೇಕು ಎಂದಾದರೆ ಯಾರಿಗೆ ಬೇಕಾದರೂ ಚುನಾವಣಾ ಆಯೋಗವನ್ನು ಸಮೀಪಿಸಬಹುದುಯಆಯೋಗ ಇದಕ್ಕಾಗಿ ಸೌಕರ್ಯ ಮಾಡಿಕೊಡುವುದು ಎಂದಿದ್ದಾರೆ ರಾವತ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT