ಮುಂಬೈ: ಶಿವಸೇನಾ ಸಂಸ್ಥಾಪಕ ಬಾಳ ಠಾಕ್ರೆ ಸ್ಫೂರ್ತಿಸೆಲೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೊಗಳಿದ್ದಾರೆ.
ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಶಾಸಕರ ಖರೀದಿ ಯತ್ನ: ಸೇನಾ ಆರೋಪ
ಠಾಕ್ರೆಯವರ ಭಾಷಣದ ವಿಡಿಯೊವೊಂದನ್ನು ಟ್ವೀಟ್ ಮಾಡಿದ ಫಡಣವೀಸ್, ಠಾಕ್ರೆ ಜನರಿಗೆ ಸ್ವಾಭಿಮಾನವನ್ನು ಹೇಳಿಕೊಟ್ಟವರು . ಹಿಂದೂ ಹೃದಯ್ ಸಾಮ್ರಾಟ್ ಬಾಳ ಠಾಕ್ರೆ ಅವರ ಪುಣ್ಯತಿಥಿಗೆ ನೂರಾರು ನಮನಗಳು ಎಂದಿದ್ದಾರೆ.
आमचे प्रेरणास्थान, हिंदूहृदयसम्राट माननीय बाळासाहेब ठाकरे यांना स्मृतिदिनी शत शत प्रणाम ! pic.twitter.com/8DG9Deyydk
— Devendra Fadnavis (@Dev_Fadnavis) November 17, 2019
स्वाभिमान जपण्याचा मूलमंत्र आदरणीय बाळासाहेबांनी आपल्या सर्वांना दिला ! pic.twitter.com/sPdALKDlzS
— Devendra Fadnavis (@Dev_Fadnavis) November 17, 2019
ಸೋಮವಾರ ಸಂಸತ್ನ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಅದಕ್ಕಿಂತ ಮುನ್ನ ನಡೆಯಲಿರುವ ಆಡಳಿತಾರೂಢ ಎನ್ಡಿಎ ಸಭೆಗೆ ಹಾಜರಾಗದಿರಲು ಶಿವಸೇನಾ ನಿರ್ಧರಿಸಿದೆ.
ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳ ನಡುವೆ ಸಭೆಗೆ ಹಾಜರಾಗದಿರಲು ನಾವು ನಿರ್ಧರಿಸಿದ್ದೇವೆ ಎಂದು ಶಿವಸೇನಾ ನಾಯಕ ಸಂಜಯ್ ರಾವುತ್ ಶನಿವಾರ ಹೇಳಿದ್ದರು.
ಶರದ್ ಪವಾರ್ರ ಎನ್ಸಿಪಿ ಮತ್ತು ಕಾಂಗ್ರೆಸ್ ಜತೆ ಸೇರಿ ಸರ್ಕಾರ ರಚನೆ ಮಾಡಲು ಶಿವಸೇನಾ ಪ್ರಯತ್ನಿಸುತ್ತಿದೆ. ಈ ಮೂರು ಪಕ್ಷಗಳು ಕಳೆದ ಒಂದು ವಾರದಿಂದ ಮಾತುಕತೆ ನಡೆಸುತ್ತಿದ್ದು ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಸಿಎಂಪಿ) ರೂಪಿಸುತ್ತಿವೆ.
ಶಿವಸೇನಾ-ಎನ್ಸಿಪಿ-ಕಾಂಗ್ರೆಸ್ ಮೈತ್ರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲಿದ್ದು, ಅದು ಪೂರ್ಣಾವಧಿ ಸರ್ಕಾರ ಆಗಿರುತ್ತದೆ ಎಂದು ಶರದ್ ಪವಾರ್ ಹೇಳಿದ್ದರು.
ಏತನ್ಮಧ್ಯೆ ಪವಾರ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಸಭೆ ಭಾನುವಾರ ನಡೆಯಲು ನಿಗದಿಯಾಗಿದ್ದರೂ ಅದನ್ನು ಆಮೇಲೆ ರದ್ದು ಮಾಡಲಾಯಿತು. ಈ ಸಭೆ ಸೋಮವಾರ ಅಥವಾ ಮಂಗಳವಾರ ನಡೆಯುವ ಸಾಧ್ಯತೆ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.