ತಿಂಗಳ ಪೂಜೆ ಜೂನ್ 14ರಿಂದ ಆರಂಭವಾಗಲಿದ್ದು, ದೇವಸ್ಥಾನದೊಳಗೆ ಪ್ರವೇಶಕ್ಕೆ ಭಕ್ತರಿಗೆ ಅವಕಾಶ ನೀಡುವುದಾಗಿ ಕಳೆದ ವಾರ ಕೇರಳ ಸರ್ಕಾರ ಘೋಷಿಸಿತ್ತು. ಇದಾದ ಬೆನ್ನಲ್ಲೇ ಮುಖ್ಯ ಅರ್ಚಕರು ತಿರುವಾಂಕೂರು ದೇವಸ್ವಂ ಮಂಡಳಿಗೆ (ಟಿಡಿಬಿ) ಪತ್ರ ಬರೆದು, ಭಕ್ತರ ಪ್ರವೇಶಕ್ಕೆ ಅನುಮತಿ ನೀಡಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದರು.