<p><strong>ನವದೆಹಲಿ:</strong> ಪೊಲೀಸ್ ಮಹಾನಿರ್ದೇಶಕರ ನೇಮಕಾತಿಯಲ್ಲಿ ರಾಜ್ಯ ಸರ್ಕಾರಗಳ ನಿರ್ಧಾರವೇ ಅಂತಿಮ ಎನ್ನುವ ಪ್ರತಿಪಾದನೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.</p>.<p>ಪೊಲೀಸ್ ಇಲಾಖೆಯ ವಿಷಯ ರಾಜ್ಯಗಳಿಗೆ ಸಂಬಂಧಿಸಿದ್ದು. ಹೀಗಾಗಿ, ಈ ಬಗ್ಗೆ ರಾಜ್ಯ ಸರ್ಕಾರಗಳೇ ನಿರ್ಧಾರಕೈಗೊಳ್ಳಲು ಅವಕಾಶ ನೀಡಬೇಕು ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಲಾಗಿತ್ತು.</p>.<p>ಹಾಲಿ ಡಿಜಿಪಿ ನಿವೃತ್ತರಾಗುವ ಮೂರು ತಿಂಗಳ ಮುನ್ನವೇ ಹೊಸ ಡಿಜಿಪಿಗೆ ಸಂಬಂಧಿಸಿದ ಎಲ್ಲ ಪ್ರಸ್ತಾವಗಳನ್ನು ಕೇಂದ್ರೀಯ ಲೋಕಸೇವಾ ಆಯೋಗಕ್ಕೆ ಕನಿಷ್ಠ ಮೂರು ತಿಂಗಳ ಮುನ್ನವೇ ಕಳುಹಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.</p>.<p>ಈ ಬಗ್ಗೆ ಯುಪಿಎಸ್ಸಿ ಸಮಿತಿಯನ್ನು ರಚಿಸಿ ರಾಜ್ಯಗಳಿಗೆ ಮಾಹಿತಿ ನೀಡಬೇಕು. ರಾಜ್ಯ ಸರ್ಕಾರಗಳು ತಕ್ಷಣವೇ ಒಬ್ಬರನ್ನು ಸಮಿತಿಗೆ ನೇಮಿಸಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.</p>.<p>ಡಿಜಿಪಿ ನೇಮಕದ ಕುರಿತು ಕಳೆದ ವರ್ಷ ನೀಡಿದ್ದ ಆದೇಶವನ್ನು ಬದಲಾಯಿಸುವಂತೆ ಪಂಜಾಬ್, ಕೇರಳ, ಪಶ್ಚಿಮ ಬಂಗಾಳ ರಾಜ್ಯಗಳು ಕೋರಿದ್ದ ಮನವಿಯನ್ನು ಸಹ ನ್ಯಾಯಾಲಯ ನಿರಾಕರಿಸಿದೆ.</p>.<p>ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು ಈ ಆದೇಶ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪೊಲೀಸ್ ಮಹಾನಿರ್ದೇಶಕರ ನೇಮಕಾತಿಯಲ್ಲಿ ರಾಜ್ಯ ಸರ್ಕಾರಗಳ ನಿರ್ಧಾರವೇ ಅಂತಿಮ ಎನ್ನುವ ಪ್ರತಿಪಾದನೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.</p>.<p>ಪೊಲೀಸ್ ಇಲಾಖೆಯ ವಿಷಯ ರಾಜ್ಯಗಳಿಗೆ ಸಂಬಂಧಿಸಿದ್ದು. ಹೀಗಾಗಿ, ಈ ಬಗ್ಗೆ ರಾಜ್ಯ ಸರ್ಕಾರಗಳೇ ನಿರ್ಧಾರಕೈಗೊಳ್ಳಲು ಅವಕಾಶ ನೀಡಬೇಕು ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಲಾಗಿತ್ತು.</p>.<p>ಹಾಲಿ ಡಿಜಿಪಿ ನಿವೃತ್ತರಾಗುವ ಮೂರು ತಿಂಗಳ ಮುನ್ನವೇ ಹೊಸ ಡಿಜಿಪಿಗೆ ಸಂಬಂಧಿಸಿದ ಎಲ್ಲ ಪ್ರಸ್ತಾವಗಳನ್ನು ಕೇಂದ್ರೀಯ ಲೋಕಸೇವಾ ಆಯೋಗಕ್ಕೆ ಕನಿಷ್ಠ ಮೂರು ತಿಂಗಳ ಮುನ್ನವೇ ಕಳುಹಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.</p>.<p>ಈ ಬಗ್ಗೆ ಯುಪಿಎಸ್ಸಿ ಸಮಿತಿಯನ್ನು ರಚಿಸಿ ರಾಜ್ಯಗಳಿಗೆ ಮಾಹಿತಿ ನೀಡಬೇಕು. ರಾಜ್ಯ ಸರ್ಕಾರಗಳು ತಕ್ಷಣವೇ ಒಬ್ಬರನ್ನು ಸಮಿತಿಗೆ ನೇಮಿಸಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.</p>.<p>ಡಿಜಿಪಿ ನೇಮಕದ ಕುರಿತು ಕಳೆದ ವರ್ಷ ನೀಡಿದ್ದ ಆದೇಶವನ್ನು ಬದಲಾಯಿಸುವಂತೆ ಪಂಜಾಬ್, ಕೇರಳ, ಪಶ್ಚಿಮ ಬಂಗಾಳ ರಾಜ್ಯಗಳು ಕೋರಿದ್ದ ಮನವಿಯನ್ನು ಸಹ ನ್ಯಾಯಾಲಯ ನಿರಾಕರಿಸಿದೆ.</p>.<p>ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು ಈ ಆದೇಶ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>