ರಾಣಾ ಅವರ ಹೇಳಿಕೆ ಬಗ್ಗೆ ಅಂತರ ಕಾಯ್ದುಕೊಂಡ ಉತ್ತರ ಪ್ರದೇಶದ ಬಿಜೆಪಿ ವಕ್ತಾರ ಚಂದ್ರಮೋಹನ್, ಬಿಜೆಪಿ ಈ ರೀತಿಯ ಹೇಳಿಕೆಗಳಿಗೆ ಬೆಂಬಲ ನೀಡುವುದಿಲ್ಲ, ಅದು ಅವರ ವೈಯಕ್ತಿಕ ಹೇಳಿಕೆ. ಪಕ್ಷದ ನಾಯಕರಿಗೆ ಸ್ಪಷ್ಟವಾದ ನೀತಿ ನಿಯಮಗಳಿವೆ. ಕಾನೂನು ಬಾಹಿರವಾದ ಯಾವುದೇ ಹೇಳಿಕೆ ನೀಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾರೊಬ್ಬರೂ ಕಾನೂನುಗಿಂತ ಮೇಲು ಅಲ್ಲ ಎಂದು ಹೇಳಿದ್ದಾರೆ.