‘1939ರಲ್ಲಿ ಸುಭಾಷ್ಚಂದ್ರ ಬೋಸ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ, ಗಾಂಧೀಜಿ ಅವರು ಬೆಂಬಲಿಸಿದ್ದ ಪಟ್ಟಾಭಿ ಸೀತಾರಾಮಯ್ಯ ಅವರ ವಿರುದ್ಧ ಜಯಗಳಿಸಿದ್ದರು. ಎರಡು ದಶಕದ ಅವಧಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನಲ್ಲಿ ಗಾಂಧೀಜಿ ಅಧಿಕಾರಕ್ಕೆ ಅದು ಮೊದಲ ಸವಾಲಾಗಿತ್ತು. ಅಂತಿಮ ವಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನೊಳಗಿನ ಆಂತರಿಕ ಭಿನ್ನಾಭಿಪ್ರಾಯದ ಕಾರಣಗಳಿಗಾಗಿ ಬೋಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಬೇಕಾಯಿತು’ ಎಂದು ಸುಗತ ತಮ್ಮ ಭಾಷಣದಲ್ಲಿ ಹೇಳಿದರು.