ದಿನಕರನ್ ಜತೆ ಗುರುತಿಸಿಕೊಂಡ 18 ಶಾಸಕರನ್ನು ತಮಿಳುನಾಡು ವಿಧಾನಸಭೆಯ ಸ್ಪೀಕರ್ ಪಿ.ಧನಪಾಲ್ ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಕಳೆದ ವರ್ಷ ಅನರ್ಹಗೊಳಿಸಿದ್ದರು. ಆ ಆದೇಶವನ್ನು ಮದ್ರಾಸ್ ಹೈಕೋರ್ಟ್ ಗುರುವಾರ ಎತ್ತಿ ಹಿಡಿದಿತ್ತು.ಬಹುಮತ ಕಳೆದುಕೊಳ್ಳುವ ಆತಂಕದಲ್ಲಿದ್ದ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಸರ್ಕಾರ ಈ ತೀರ್ಪು ಹೊರಬಿದ್ದ ಬಳಿಕ ನಿರಾಳವಾಗಿದೆ.