‘ಮ.ರಾಮಮೂರ್ತಿ ದತ್ತಿ ಪ್ರಶಸ್ತಿ’ಯನ್ನು ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ಅವರಿಗೆ ಸಂಶೋಧಕ ಎಂ.ಚಿದಾನಂದಮೂರ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು ₹25,000 ನಗದು, ಸ್ಮರಣಿಕೆ ಹಾಗೂ ಪ್ರಮಾಣಪತ್ರ ಒಳಗೊಂಡಿದೆ. ಪ್ರಶಸ್ತಿ ಮೊತ್ತವನ್ನು ಚಂದರಗಿ ಅವರು ಪರಿಷತ್ತಿಗೆ ಮರಳಿಸಿದರು. ಅದರಲ್ಲಿ ₹10 ಸಾವಿರವನ್ನು ಕಮಲಮ್ಮ ಅವರಿಗೆ ನೀಡಲಾಯಿತು. ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಗಳಿಸುವ ಮೂವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ತಲಾ ₹5,000 ನೀಡುವಂತೆ ಚಂದರಗಿ ತಿಳಿಸಿದರು.