ಬೆಳಿಗ್ಗೆ ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದ ಸಂದರ್ಭ ಶಿವಕುಮಾರ್ ಅವರ ರಕ್ತದ ಒತ್ತಡದಲ್ಲಿ ಏರುಪೇರು ಕಂಡು ಬಂದಿದ್ದಲ್ಲದೆ, ಜ್ವರದಿಂದ ಬಳಲುತ್ತಿದ್ದರು. ಈಕಾರಣ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರ ಸಲಹೆಯ ಮೇರೆಗೆ ದಾಖಲು ಮಾಡಿಕೊಳ್ಳಲಾಯಿತು ಎಂದು ಮೂಲಗಳು ತಿಳಿಸಿವೆ.