ಪರಿಸ್ಥಿತಿಯ ಗಾಂಭೀರ್ಯವನ್ನುಅರ್ಥ ಮಾಡಿಕೊಳ್ಳದಿರುವ ಜನರ ವಿರುದ್ಧ ಗುಡುಗಿದ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಜನರು ಸರ್ಕಾರದ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅಜಿತ್ ಪವಾರ್, ಕಾನೂನು ಉಲ್ಲಂಘಿಸುವ ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.ಪೊಲೀಸ್ ಮತ್ತು ಜನರು ಶಿಸ್ತು ಅಳವಡಿಸಿಕೊಳ್ಳಬೇಕು. ಅಮೆರಿಕದಲ್ಲಿ ಲಾಕ್ಡೌನ್ ಜಾರಿಗೆ ತರಲು ಸೇನೆಯನ್ನೇ ಕರೆತರಬೇಕಾಯಿತು.ಆ ಹಂತಕ್ಕೆ ತಲುಪಬಾರದು ಎಂಬುದು ನಮ್ಮ ಜವಾಬ್ದಾರಿ ಎಂದಿದ್ದಾರೆ.