ನವದೆಹಲಿ: ಕೋವಿಡ್–19 ವಿರುದ್ಧದ ಹೋರಾಟದಲ್ಲಿ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರು ‘ಯೋಧರು’ ಆಗಿದ್ದು, ಇವರನ್ನು ರಕ್ಷಿಸಬೇಕು ಎಂದು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಈ ಸಂಬಂಧ ಸಲ್ಲಿಕೆಯಾಗಿದ್ದ 3 ಅರ್ಜಿಗಳನ್ನು ವಿಡಿಯೊ ಕಾನ್ಫರೆನ್ಸ್ ಮುಖಾಂತರ ಸುಪ್ರೀಂ ಕೋರ್ಟ್ ನಡೆಸಿತು. ‘ವೈದ್ಯರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಕುಟುಂಬದ ರಕ್ಷಣೆಯ ಬಗ್ಗೆಯೂ ಕ್ರಮ ವಹಿಸಲಾಗಿದೆ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು.
ವೇತನ ಕಡಿತವಿಲ್ಲ: ‘ಸಿಬ್ಬಂದಿ ವೇತನ ಕಡಿತ ಮಾಡಿದರೆ ಪೊಲೀಸರನ್ನು ಕಳುಹಿಸುತ್ತೇವೆ’ ಎಂದು ತಿಳಿಸಿದರು.