ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದಾಖಲೆ ನೀಡಲು ರಾಷ್ಟ್ರೀಯ ಭದ್ರತೆ ಕಾರಣವಾಗಬಾರದು’

Last Updated 10 ಏಪ್ರಿಲ್ 2019, 18:19 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಭದ್ರತೆ ನೆಪವೊಡ್ಡಿ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಲಾದ ದಾಖಲೆಗಳನ್ನು ತಡೆಹಿಡಿಯಬಾರದು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.ಆದರೆ, ಮಾಹಿತಿಯನ್ನು ಬಹಿರಂಗಪಡಿಸುವುದಕ್ಕಿಂತ ತಡೆಹಿಡಿಯುವುದರಿಂದಲೇ ಹೆಚ್ಚು ಹಾನಿ ಎನ್ನುವುದನ್ನು ಅರ್ಜಿದಾರರು ಸಾಬೀತುಪಡಿಸಬೇಕು ಎಂದು ನ್ಯಾಯಮೂರ್ತಿ ಕೆ.ಎಂ. ಜೋಸೆಫ್‌ಅವರು ತೀರ್ಪಿನಲ್ಲಿ ಈ ವಿಷಯ ಉಲ್ಲೇಖಿಸಿದ್ದಾರೆ. ಆರ್‌ಟಿಐ ಬೆಲೆ ಕಟ್ಟಲಾಗದ ಹಕ್ಕನ್ನು ನಾಗರಿಕರಿಗೆ ನೀಡಿದೆ. ಜತೆಗೆ, ಭಷ್ಟಾಚಾರ ಮತ್ತು ಮಾನವ ಹಕ್ಕುಗಳ ಉಲ್ಲಂಘನೆ ನಿಯಂತ್ರಿ
ಸಲು ನಡೆಯುವ ಹೋರಾಟಕ್ಕೂ ಇದು ಪೂರಕವಾಗಿದೆ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. ಈ ಬಗ್ಗೆ ಸರ್ಕಾರ ಸಲ್ಲಿಸಿದ್ದ ತಕರಾರುಗಳನ್ನು ನ್ಯಾಯಾಲಯ ತಿರಸ್ಕರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT